<p><strong>ತುಮಕೂರು:</strong> ಒಳ ಮೀಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಒಳಮೀಸಲಾತಿ ಹೋರಾಟ ಸಮಿತಿ, ಜಿಲ್ಲಾ ಮಾದಾರ ಮಹಾಸಭಾ ನೇತೃತ್ವದಲ್ಲಿ ನಗರದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಸರ್ಕಾರದ ಧೋರಣೆ ವಿರುದ್ಧ ಘೋಷಣೆಗಳು ಮೊಳಗಿದವು. ನೀಲಿ ಬಣ್ಣದ ಬಾವುಟ ಹಾಗೂ ಶಾಲುಗಳು ಮೆರವಣಿಗೆಯಲ್ಲಿ ರಾರಾಜಿಸಿದವು.</p>.<p>ಪ್ರಮುಖರಾದ ಕೆ.ದೊರೈರಾಜ್, ವೈ.ಎಚ್.ಹುಚ್ಚಯ್ಯ, ಕೆಂಚಮಾರಯ್ಯ, ಗಂಗಹನುಮಯ್ಯ, ವೈ.ಕೆ.ಬಾಲಕೃಷ್ಣಪ್ಪ, ಕುಂದೂರು ತಿಮ್ಮಯ್ಯ, ಕೊಟ್ಟಶಂಕರ್, ರಾಜಸಿಂಹ, ಪಾವಗಡ ಶ್ರೀರಾಮ್, ನರಸಿಂಹಮೂರ್ತಿ, ಗಂಗರಾಜು, ಡಿ.ಟಿ.ವೆಂಕಟೇಶ್, ಡಾ.ಅರುಂದತಿ, ವೈ.ಕೆ.ತಿಪ್ಪೇಸ್ವಾಮಿ, ಕುಂದೂರು ಮುರುಳಿ ಇತರರು ಭಾಗವಹಿಸಿದ್ದರು.</p>.<p>ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮುಂದಿನ ಅಧಿವೇಶನದಲ್ಲಿ ಸಚಿವರು, ಶಾಸಕರು ಒತ್ತಡ ತರಬೇಕು ಎಂದು ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಮುಖರು ಒತ್ತಾಯಿಸಿದರು.</p>.<p>ಒಳ ಮೀಸಲಾತಿಗೆ ಆಗ್ರಹಿಸಿ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ಜಾರಿ ಮಾಡದೆ ವಿಳಂಬ ಮಾಡಲಾಗುತ್ತಿದೆ. ಸರ್ಕಾರ ಒಳ ಮೀಸಲಾತಿ ವಿಚಾರದಲ್ಲಿ ಅಸ್ಪಷ್ಟ ತೀರ್ಮಾನ ಕೈಗೊಳ್ಳುತ್ತದೆ ಎಂದು ಯಾರು ಭಾವಿಸಿರಲಿಲ್ಲ. ಈಗಲಾದರೂ ಸರಿಪಡಿಸಿ ಜಾರಿ ಮಾಡಬೇಕೆಂದು ಮುಖಂಡರು ಮನವಿ ಮಾಡಿದರು.</p>.<blockquote>ಪ್ರಮುಖ ಬೇಡಿಕೆಗಳು</blockquote>. <ul><li><p>ನೇರ ನೇಮಕಾತಿ ಜತೆಗೆ ಪದೋನ್ನತಿ, ಬ್ಯಾಕ್ಲಾಗ್ ಹುದ್ದೆ ಭರ್ತಿ, ಕೆಐಎಡಿಬಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ ಸೇರಿ ಎಲ್ಲ ವಲಯಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು</p></li><li><p>ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ), ಪರಿಶಿಷ್ಟ ಪಂಗಡದ ಉಪಯೋಜನೆ (ಟಿಎಸ್ಪಿ) ಅನುದಾನ 6:6:5 ಅನುಪಾತದಲ್ಲಿ ಹಂಚಿಕೆ ಆಗಬೇಕು</p></li><li><p>ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿ ನೀಡಬೇಕು. ಈ ಸಮುದಾಯಕ್ಕೆ ಪ್ರತ್ಯೇಕ ನಿಗಮ ಹಾಗೂ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕು </p></li><li><p>ಒಳಮೀಸಲಾತಿ ಮುಂದುವರಿಸಲು ಶಾಶ್ವತ ಆಯೋಗ ನೇಮಕ ಮಾಡಬೇಕು. ಮೀಸಲಾತಿ ಹೆಚ್ಚಳಕ್ಕೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು</p></li><li><p>ಒಳಮೀಸಲಾತಿ ಹೋರಾಟಗಾರರ ಮೇಲೆ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು </p></li><li><p>ಆದಿ ಜಾಂಬವ ಅಭಿವೃದ್ಧಿ ನಿಗಮ, ಲಿಡ್ಕರ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಗೆ ತಲಾ ₹2 ಸಾವಿರ ಕೋಟಿ ಅನುದಾನ ಒದಗಿಸಬೇಕು</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಒಳ ಮೀಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಒಳಮೀಸಲಾತಿ ಹೋರಾಟ ಸಮಿತಿ, ಜಿಲ್ಲಾ ಮಾದಾರ ಮಹಾಸಭಾ ನೇತೃತ್ವದಲ್ಲಿ ನಗರದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಸರ್ಕಾರದ ಧೋರಣೆ ವಿರುದ್ಧ ಘೋಷಣೆಗಳು ಮೊಳಗಿದವು. ನೀಲಿ ಬಣ್ಣದ ಬಾವುಟ ಹಾಗೂ ಶಾಲುಗಳು ಮೆರವಣಿಗೆಯಲ್ಲಿ ರಾರಾಜಿಸಿದವು.</p>.<p>ಪ್ರಮುಖರಾದ ಕೆ.ದೊರೈರಾಜ್, ವೈ.ಎಚ್.ಹುಚ್ಚಯ್ಯ, ಕೆಂಚಮಾರಯ್ಯ, ಗಂಗಹನುಮಯ್ಯ, ವೈ.ಕೆ.ಬಾಲಕೃಷ್ಣಪ್ಪ, ಕುಂದೂರು ತಿಮ್ಮಯ್ಯ, ಕೊಟ್ಟಶಂಕರ್, ರಾಜಸಿಂಹ, ಪಾವಗಡ ಶ್ರೀರಾಮ್, ನರಸಿಂಹಮೂರ್ತಿ, ಗಂಗರಾಜು, ಡಿ.ಟಿ.ವೆಂಕಟೇಶ್, ಡಾ.ಅರುಂದತಿ, ವೈ.ಕೆ.ತಿಪ್ಪೇಸ್ವಾಮಿ, ಕುಂದೂರು ಮುರುಳಿ ಇತರರು ಭಾಗವಹಿಸಿದ್ದರು.</p>.<p>ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮುಂದಿನ ಅಧಿವೇಶನದಲ್ಲಿ ಸಚಿವರು, ಶಾಸಕರು ಒತ್ತಡ ತರಬೇಕು ಎಂದು ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಮುಖರು ಒತ್ತಾಯಿಸಿದರು.</p>.<p>ಒಳ ಮೀಸಲಾತಿಗೆ ಆಗ್ರಹಿಸಿ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ಜಾರಿ ಮಾಡದೆ ವಿಳಂಬ ಮಾಡಲಾಗುತ್ತಿದೆ. ಸರ್ಕಾರ ಒಳ ಮೀಸಲಾತಿ ವಿಚಾರದಲ್ಲಿ ಅಸ್ಪಷ್ಟ ತೀರ್ಮಾನ ಕೈಗೊಳ್ಳುತ್ತದೆ ಎಂದು ಯಾರು ಭಾವಿಸಿರಲಿಲ್ಲ. ಈಗಲಾದರೂ ಸರಿಪಡಿಸಿ ಜಾರಿ ಮಾಡಬೇಕೆಂದು ಮುಖಂಡರು ಮನವಿ ಮಾಡಿದರು.</p>.<blockquote>ಪ್ರಮುಖ ಬೇಡಿಕೆಗಳು</blockquote>. <ul><li><p>ನೇರ ನೇಮಕಾತಿ ಜತೆಗೆ ಪದೋನ್ನತಿ, ಬ್ಯಾಕ್ಲಾಗ್ ಹುದ್ದೆ ಭರ್ತಿ, ಕೆಐಎಡಿಬಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ ಸೇರಿ ಎಲ್ಲ ವಲಯಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು</p></li><li><p>ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ), ಪರಿಶಿಷ್ಟ ಪಂಗಡದ ಉಪಯೋಜನೆ (ಟಿಎಸ್ಪಿ) ಅನುದಾನ 6:6:5 ಅನುಪಾತದಲ್ಲಿ ಹಂಚಿಕೆ ಆಗಬೇಕು</p></li><li><p>ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿ ನೀಡಬೇಕು. ಈ ಸಮುದಾಯಕ್ಕೆ ಪ್ರತ್ಯೇಕ ನಿಗಮ ಹಾಗೂ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕು </p></li><li><p>ಒಳಮೀಸಲಾತಿ ಮುಂದುವರಿಸಲು ಶಾಶ್ವತ ಆಯೋಗ ನೇಮಕ ಮಾಡಬೇಕು. ಮೀಸಲಾತಿ ಹೆಚ್ಚಳಕ್ಕೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು</p></li><li><p>ಒಳಮೀಸಲಾತಿ ಹೋರಾಟಗಾರರ ಮೇಲೆ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು </p></li><li><p>ಆದಿ ಜಾಂಬವ ಅಭಿವೃದ್ಧಿ ನಿಗಮ, ಲಿಡ್ಕರ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಗೆ ತಲಾ ₹2 ಸಾವಿರ ಕೋಟಿ ಅನುದಾನ ಒದಗಿಸಬೇಕು</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>