ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, 12 ಅಡಿಗಳಷ್ಟು ಎತ್ತರದ ಬೃಹತ್ ಕೊಳಾಯಿಗಳ ಮೂಲಕ ನೀರು ತೆಗೆದುಕೊಂಡು ಹೋದಲ್ಲಿ ಹೇಮಾವತಿ ನಾಲೆಯ 70ನೇ ಕಿ.ಮೀ. ನಿಂದ ಮುಂದಕ್ಕೆ ನೀರು ಹರಿಯಲು ಸಾಧ್ಯವಿಲ್ಲ. ಆದ್ದರಿಂದ ಜಿಲ್ಲೆಯ ಜನರ ಹಿತದೃಷ್ಟಿಯಿಂದ ರಾಜಕೀಯವನ್ನು ಬದಿಗೊತ್ತಿ ಎಲ್ಲ ಪಕ್ಷಗಳ ಶಾಸಕರು, ಮುಖಂಡರು ಕಾಮಗಾರಿ ತಡೆಯಲು ಮುಂದಾಗಬೇಕು ಎಂದರು.