ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈತ್ರಿ ಅಭ್ಯರ್ಥಿ ದೇವೇಗೌಡರಿಗೆ ಜಿಲ್ಲೆಯ ಹಲವು ಕಡೆ ಕಾಂಗ್ರೆಸ್ ಪಕ್ಷದ ಮುಖಂಡರು ಬೆಂಬಲ ಕೊಡಲಿಲ್ಲ. ಮಧುಗಿರಿಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲ. ಅಂತಹ ಕಡೆ ಬಿಜೆಪಿಗೆ ಹೆಚ್ಚು ಮತಗಳು ಬರುತ್ತವೆ ಎಂದರೆ ಅಲ್ಲಿ ಏನೋ ಷಡ್ಯಂತ್ರ ನಡೆದಿದೆ ಎಂದೇ ಅರ್ಥ. ಕಾಂಗ್ರೆಸ್ ಮುಖಂಡರ ಕುತಂತ್ರ ರಾಜಕಾರಣದಿಂದ ದೇವೇಗೌಡರು ಸೋಲು ಅನುಭವಿಸಿದರು’ ಎಂದು ಆರೋಪಿಸಿದರು.