<p><strong>ತುಮಕೂರು:</strong> ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಇಲ್ಲಿನ ಜಯನಗರ ಪೊಲೀಸ್ ಠಾಣೆ ಪಿಎಸ್ಐ ಎಚ್.ಮುತ್ತುರಾಜ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಕೆಲಸದಿಂದ ಅಮಾನತುಗೊಳಿಸಿದ್ದಾರೆ.</p>.<p>ನಗರದ ಬನಶಂಕರಿಯಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣ ಮಾರಾಟ ಮಳಿಗೆ ಹೊಂದಿರುವ ಟಿ.ಪಿ.ನಾಗರಾಜ್ ಅವರನ್ನು 2019ರ ನವೆಂಬರ್ 17ರಂದು ಇಬ್ಬರು ದುಷ್ಕರ್ಮಿಗಳು ವಂಚಿಸಿ ₹ 25ರಿಂದ 30 ಲಕ್ಷ ಮೌಲ್ಯದ ಆಭರಣಗಳನ್ನು ಕಳ್ಳತನ ಮಾಡಿದ್ದರು.</p>.<p>ಅಂದೇ ನಾಗರಾಜ್ ದೂರು ನೀಡಲು ಮುಂದಾದರೂ ಮುತ್ತುರಾಜ್ ದೂರು ಸ್ವೀಕರಿಸಿಲ್ಲ. ‘ದೂರು ದಾಖಲಿಸುವುದು ಬೇಡ, ಚಿನ್ನಾಭರಣ ಹುಡುಕಿಕೊಡುವೆ’ ಎಂದು ಭರವಸೆ ನೀಡಿ ಕಳುಹಿಸಿದ್ದರು.</p>.<p>ಇತ್ತೀಚೆಗೆ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದಾಗ ತುಮಕೂರಿನಲ್ಲಿಯೂ ಕಳ್ಳತನ ನಡೆಸಿರುವುದಾಗಿ ವಿಚಾರಣೆ ವೇಳೆ ಮಾಹಿತಿ ನೀಡಿದ್ದರು.</p>.<p>ಈ ವಿಷಯವನ್ನು ಅಲ್ಲಿನ ಪೊಲೀಸರು ವಂಶಿಕೃಷ್ಣ ಅವರ ಗಮನಕ್ಕೆ ತಂದಿದ್ದಾರೆ. ಎಸ್ಪಿ ಅವರು ಮತ್ತಷ್ಟು ವಿಚಾರಣೆ ನಡೆಸಿದಾಗ ಮುತ್ತುರಾಜ್ ದೂರು ಸ್ವೀಕರಿಸದಿರುವುದು ತಿಳಿದು ಬಂದಿದೆ. ಈ ಬಗ್ಗೆ ವಿಚಾರಣೆ ನಡೆಸುವಂತ ಡಿವೈಎಸ್ಪಿ ತಿಪ್ಪೇಸ್ವಾಮಿ ಅವರಿಗೆ ಎಸ್ಪಿ ಸೂಚಿಸಿದ್ದಾರೆ.</p>.<p>ಈ ಕುರಿತು ಮಾತನಾಡಿದಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಡಾ.ಕೆ.ವಂಶಿಕೃಷ್ಣ,ಇಷ್ಟು ಗಂಭೀರ ಪ್ರಕರಣವಾಗಿದ್ದರೂ ಪಿಎಸ್ಐ ಏಕೆ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎನ್ನುವ ವಿಚಾರ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಸ್ಪಿ ತಿಪ್ಪೇಸ್ವಾಮಿ ಹಾಗೂ ಸಿಪಿಐ ಪಾರ್ವತಮ್ಮ ಅವರಿಗೆ ಎಸ್ಪಿ ಸೂಚಿಸಿದ್ದಾರೆ.ಅಮಾನತಿನಲ್ಲಿರುವ ಮುತ್ತುರಾಜ್ ಕೇಂದ್ರಸ್ಥಾನವನ್ನು ಬಿಟ್ಟು ಹೋಗಬಾರದು. ಒಂದು ವೇಳೆ ಬಿಟ್ಟು ಹೋಗಬೇಕಾದರೆ ವಿಳಾಸವನ್ನು ತಿಲಕ್ ಪಾರ್ಕ್ ಸಿಪಿಐ ಅವರಿಗೆ ನೀಡಿ ಅನುಮತಿ ಪಡೆಯಬೇಕು ಎಂದು ಆದೇಶಿಸಿದ್ದಾರೆ.</p>.<p>‘ಪೊಲೀಸರು ಸಾರ್ವಜನಿಕರ ಕೆಲಸಗಳನ್ನು ಸಮರ್ಪಕವಾಗಿ ಮಾಡಿಕೊಡಬೇಕು. ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ಜನಸ್ನೇಹಿಯಾಗಿ ಇಲಾಖೆ ಕೆಲಸ ಮಾಡಬೇಕು’ ಎಂದು ವಂಶಿಕೃಷ್ಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಇಷ್ಟೊಂದು ಮೊತ್ತದ ಕಳ್ಳತನ ನಡೆದಿದೆ. ಇದು ಗಂಭೀರ ಪ್ರಕರಣ. ಹೀಗಿದ್ದರೂ ಪ್ರಕರಣ ದಾಖಲಿಸಿಕೊಳ್ಳದಿರುವುದು ಅಕ್ಷಮ್ಯ’.ಆರೋಪಿಗಳು ಬೆಂಗಳೂರಿನಲ್ಲಿ ಸಿಕ್ಕರು ಎನ್ನುವುದು ಎರಡನೇ ಮಾತು. ಆದರೆ ಇಂತಹ ಗಂಭೀರವಾದ ಅಪರಾಧವಿದ್ದರೂ ಪ್ರಕರಣ ದಾಖಲಿಸದಿರುವುದು ಅಕ್ಷಮ್ಯ. ಇದು ಜಿಲ್ಲೆಯ ಎಲ್ಲ ಪೊಲೀಸರಿಗೂ ಎಚ್ಚರಿಕೆ ಆಗಬೇಕು ಎಂದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಇಲ್ಲಿನ ಜಯನಗರ ಪೊಲೀಸ್ ಠಾಣೆ ಪಿಎಸ್ಐ ಎಚ್.ಮುತ್ತುರಾಜ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಕೆಲಸದಿಂದ ಅಮಾನತುಗೊಳಿಸಿದ್ದಾರೆ.</p>.<p>ನಗರದ ಬನಶಂಕರಿಯಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣ ಮಾರಾಟ ಮಳಿಗೆ ಹೊಂದಿರುವ ಟಿ.ಪಿ.ನಾಗರಾಜ್ ಅವರನ್ನು 2019ರ ನವೆಂಬರ್ 17ರಂದು ಇಬ್ಬರು ದುಷ್ಕರ್ಮಿಗಳು ವಂಚಿಸಿ ₹ 25ರಿಂದ 30 ಲಕ್ಷ ಮೌಲ್ಯದ ಆಭರಣಗಳನ್ನು ಕಳ್ಳತನ ಮಾಡಿದ್ದರು.</p>.<p>ಅಂದೇ ನಾಗರಾಜ್ ದೂರು ನೀಡಲು ಮುಂದಾದರೂ ಮುತ್ತುರಾಜ್ ದೂರು ಸ್ವೀಕರಿಸಿಲ್ಲ. ‘ದೂರು ದಾಖಲಿಸುವುದು ಬೇಡ, ಚಿನ್ನಾಭರಣ ಹುಡುಕಿಕೊಡುವೆ’ ಎಂದು ಭರವಸೆ ನೀಡಿ ಕಳುಹಿಸಿದ್ದರು.</p>.<p>ಇತ್ತೀಚೆಗೆ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದಾಗ ತುಮಕೂರಿನಲ್ಲಿಯೂ ಕಳ್ಳತನ ನಡೆಸಿರುವುದಾಗಿ ವಿಚಾರಣೆ ವೇಳೆ ಮಾಹಿತಿ ನೀಡಿದ್ದರು.</p>.<p>ಈ ವಿಷಯವನ್ನು ಅಲ್ಲಿನ ಪೊಲೀಸರು ವಂಶಿಕೃಷ್ಣ ಅವರ ಗಮನಕ್ಕೆ ತಂದಿದ್ದಾರೆ. ಎಸ್ಪಿ ಅವರು ಮತ್ತಷ್ಟು ವಿಚಾರಣೆ ನಡೆಸಿದಾಗ ಮುತ್ತುರಾಜ್ ದೂರು ಸ್ವೀಕರಿಸದಿರುವುದು ತಿಳಿದು ಬಂದಿದೆ. ಈ ಬಗ್ಗೆ ವಿಚಾರಣೆ ನಡೆಸುವಂತ ಡಿವೈಎಸ್ಪಿ ತಿಪ್ಪೇಸ್ವಾಮಿ ಅವರಿಗೆ ಎಸ್ಪಿ ಸೂಚಿಸಿದ್ದಾರೆ.</p>.<p>ಈ ಕುರಿತು ಮಾತನಾಡಿದಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಡಾ.ಕೆ.ವಂಶಿಕೃಷ್ಣ,ಇಷ್ಟು ಗಂಭೀರ ಪ್ರಕರಣವಾಗಿದ್ದರೂ ಪಿಎಸ್ಐ ಏಕೆ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎನ್ನುವ ವಿಚಾರ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಸ್ಪಿ ತಿಪ್ಪೇಸ್ವಾಮಿ ಹಾಗೂ ಸಿಪಿಐ ಪಾರ್ವತಮ್ಮ ಅವರಿಗೆ ಎಸ್ಪಿ ಸೂಚಿಸಿದ್ದಾರೆ.ಅಮಾನತಿನಲ್ಲಿರುವ ಮುತ್ತುರಾಜ್ ಕೇಂದ್ರಸ್ಥಾನವನ್ನು ಬಿಟ್ಟು ಹೋಗಬಾರದು. ಒಂದು ವೇಳೆ ಬಿಟ್ಟು ಹೋಗಬೇಕಾದರೆ ವಿಳಾಸವನ್ನು ತಿಲಕ್ ಪಾರ್ಕ್ ಸಿಪಿಐ ಅವರಿಗೆ ನೀಡಿ ಅನುಮತಿ ಪಡೆಯಬೇಕು ಎಂದು ಆದೇಶಿಸಿದ್ದಾರೆ.</p>.<p>‘ಪೊಲೀಸರು ಸಾರ್ವಜನಿಕರ ಕೆಲಸಗಳನ್ನು ಸಮರ್ಪಕವಾಗಿ ಮಾಡಿಕೊಡಬೇಕು. ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ಜನಸ್ನೇಹಿಯಾಗಿ ಇಲಾಖೆ ಕೆಲಸ ಮಾಡಬೇಕು’ ಎಂದು ವಂಶಿಕೃಷ್ಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಇಷ್ಟೊಂದು ಮೊತ್ತದ ಕಳ್ಳತನ ನಡೆದಿದೆ. ಇದು ಗಂಭೀರ ಪ್ರಕರಣ. ಹೀಗಿದ್ದರೂ ಪ್ರಕರಣ ದಾಖಲಿಸಿಕೊಳ್ಳದಿರುವುದು ಅಕ್ಷಮ್ಯ’.ಆರೋಪಿಗಳು ಬೆಂಗಳೂರಿನಲ್ಲಿ ಸಿಕ್ಕರು ಎನ್ನುವುದು ಎರಡನೇ ಮಾತು. ಆದರೆ ಇಂತಹ ಗಂಭೀರವಾದ ಅಪರಾಧವಿದ್ದರೂ ಪ್ರಕರಣ ದಾಖಲಿಸದಿರುವುದು ಅಕ್ಷಮ್ಯ. ಇದು ಜಿಲ್ಲೆಯ ಎಲ್ಲ ಪೊಲೀಸರಿಗೂ ಎಚ್ಚರಿಕೆ ಆಗಬೇಕು ಎಂದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>