ತುಮಕೂರು: ನಗರದ ಕ್ಯಾತ್ಸಂದ್ರ ಬಳಿಯ ಬಸವಾಪಟ್ಟಣದ ಚೇತನ್ ದ್ವಿತೀಯ ಪಿಯುಸಿಯಲ್ಲಿ ಶೇ 89ರಷ್ಟು ಅಂಕ ಪಡೆದಿದ್ದರೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ವಿದ್ಯಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಇನ್ನೂ ಹೆಚ್ಚಿನ ಅಂಕ ಬರಬೇಕಿತ್ತು ಎನ್ನುವ ಕೊರಗಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕ್ಯಾತ್ಸಂದ್ರ ಪೊಲೀಸರು ತಿಳಿಸಿದ್ದಾರೆ.