<p>ತುಮಕೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಬೇಕು ಎಂದು ತುಮಕೂರು ಜಿಲ್ಲಾ ಇತಿಹಾಸ ಉಪನ್ಯಾಸಕರ ವೇದಿಕೆಯ ಸದಸ್ಯರು ಒತ್ತಾಯಿಸಿದ್ದಾರೆ.</p>.<p>ಅರ್ಥಶಾಸ್ತ್ರ ವಿಷಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ತುಮಕೂರಿನ ಎಂಪ್ರೆಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಾರಂಭಗೊಂಡಿದೆ. ಅದೇ ರೀತಿ ಇತಿಹಾಸ ಸೇರಿದಂತೆ ಇತರೆ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೂ ತುಮಕೂರು ಜಿಲ್ಲಾ ಕೇಂದ್ರದಲ್ಲೇ ಅವಕಾಶ ಕಲ್ಪಿಸಬೇಕು.</p>.<p>ಬೆಂಗಳೂರಿನ ಕೋರಮಂಗಲದ ಕಾಲೇಜೊಂದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳ ಇತಿಹಾಸ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅಲ್ಲಿಗೆ ಹೋಗಿ ಬರಲು ಈ ಸಮಯದಲ್ಲಿ ಕಷ್ಟವಾಗಲಿದೆ. ತುಮಕೂರಿನಲ್ಲಿ ಪ್ರತಿಷ್ಠಿತ ಪಿಯು ಕಾಲೇಜುಗಳು, ಪದವಿ ಕಾಲೇಜುಗಳು ಹಾಗು ವಿಶ್ವವಿದ್ಯಾಲಯ ಕೇಂದ್ರಗಳಿವೆ. ಹಾಗಾಗಿ ಇವುಗಳನ್ನು ಕೇಂದ್ರಗಳನ್ನಾಗಿ ಬಳಸಿಕೊಂಡು ಇತಿಹಾಸ ಮತ್ತು ಇತರ ವಿಷಯಗಳ ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾ ಮಟ್ಟದಲ್ಲೇ ಪ್ರಾರಂಭಿಸಬೇಕು. ಈ ಮೂಲಕ ಮಾನಸಿಕ ನೆಮ್ಮದಿಯಿಂದ ಮೌಲ್ಯಮಾಪನ ಕಾರ್ಯಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಬೇಕು ಎಂದು ತುಮಕೂರು ಜಿಲ್ಲಾ ಇತಿಹಾಸ ಉಪನ್ಯಾಸಕರ ವೇದಿಕೆಯ ಸದಸ್ಯರು ಒತ್ತಾಯಿಸಿದ್ದಾರೆ.</p>.<p>ಅರ್ಥಶಾಸ್ತ್ರ ವಿಷಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ತುಮಕೂರಿನ ಎಂಪ್ರೆಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಾರಂಭಗೊಂಡಿದೆ. ಅದೇ ರೀತಿ ಇತಿಹಾಸ ಸೇರಿದಂತೆ ಇತರೆ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೂ ತುಮಕೂರು ಜಿಲ್ಲಾ ಕೇಂದ್ರದಲ್ಲೇ ಅವಕಾಶ ಕಲ್ಪಿಸಬೇಕು.</p>.<p>ಬೆಂಗಳೂರಿನ ಕೋರಮಂಗಲದ ಕಾಲೇಜೊಂದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳ ಇತಿಹಾಸ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅಲ್ಲಿಗೆ ಹೋಗಿ ಬರಲು ಈ ಸಮಯದಲ್ಲಿ ಕಷ್ಟವಾಗಲಿದೆ. ತುಮಕೂರಿನಲ್ಲಿ ಪ್ರತಿಷ್ಠಿತ ಪಿಯು ಕಾಲೇಜುಗಳು, ಪದವಿ ಕಾಲೇಜುಗಳು ಹಾಗು ವಿಶ್ವವಿದ್ಯಾಲಯ ಕೇಂದ್ರಗಳಿವೆ. ಹಾಗಾಗಿ ಇವುಗಳನ್ನು ಕೇಂದ್ರಗಳನ್ನಾಗಿ ಬಳಸಿಕೊಂಡು ಇತಿಹಾಸ ಮತ್ತು ಇತರ ವಿಷಯಗಳ ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾ ಮಟ್ಟದಲ್ಲೇ ಪ್ರಾರಂಭಿಸಬೇಕು. ಈ ಮೂಲಕ ಮಾನಸಿಕ ನೆಮ್ಮದಿಯಿಂದ ಮೌಲ್ಯಮಾಪನ ಕಾರ್ಯಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>