<p><strong>ಗುಬ್ಬಿ</strong>: ‘ರಾಜ್ಯ ರಾಜಕೀಯದಲ್ಲಿ ಡಿಸೆಂಬರ್ ವೇಳೆಗೆ ಅನೇಕ ಬದಲಾವಣೆಗಳಾಗುವ ಸಾಧ್ಯತೆ ಇದೆ. ಆದರೆ ಯಾವ ರೀತಿ ಬದಲಾವಣೆ ಎಂದು ಹೇಳಲಾಗುವುದಿಲ್ಲ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.</p>.<p>ಸೋಮವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ರಾಜಕೀಯ ಯಾವಾಗ ಬೇಕಾದರೂ ತಿರುವು ಪಡೆದುಕೊಳ್ಳುವ ಸಾಧ್ಯತೆ ಇರುವುದರಿಂದ ಕಾರ್ಯಕರ್ತರು ಪರಿಸ್ಥಿತಿಯನ್ನು ಎದುರಿಸಲು ಸದಾ ಸಿದ್ಧರಿರಬೇಕು ಎಂದರು.</p>.<p>ದ್ವೇಷದ ರಾಜಕಾರಣ ಹೆಚ್ಚುಕಾಲ ನಡೆಯುವುದಿಲ್ಲ. ಜನರಿಗೆ ವಾಸ್ತವಿಕತೆ ಅರ್ಥವಾಗಿರುವುದರಿಂದ ತಿರುಗೇಟು ನೀಡಲು ಸಿದ್ಧರಿದ್ದಾರೆ. ಸರ್ಕಾರವು ದ್ವೇಷದ ರಾಜಕಾರಣವನ್ನು ಬದಿಗೊತ್ತಿ ಅಭಿವೃದ್ಧಿಯತ್ತ ಗಮನಹರಿಸುವಂತೆ ತಿಳಿಸಿದರು.</p>.<p>ಚುನಾವಣೆಗಳಲ್ಲಿ ಸೋಲು, ಗೆಲುವು ಸಾಮಾನ್ಯವಾಗಿದ್ದು ಅಧಿಕಾರಕ್ಕಿಂತ ಜನರ ಮಧ್ಯೆ ಇದ್ದುಕೊಂಡು ಕೆಲಸ ಮಾಡಿದ್ದಲ್ಲಿ ಜನರ ಮನಗೆಲ್ಲಲು ಸಾಧ್ಯ. ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಹೇಳಿದರು.</p>.<p>ರಾಜ್ಯದಾದ್ಯಂತ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರವಾಸ ಮಾಡಿ ಸದಸ್ಯತ್ವ ನೋಂದಣಿ ಮಾಡಿಸಲಾಗುವುದು. ಕಾರ್ಯಕರ್ತರು ಪಕ್ಷದ ಸಿದ್ಧಾಂತಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಸದಸ್ಯತ್ವ ಪಡೆದುಕೊಳ್ಳುವಂತೆ ಮಾಡಬೇಕಾಗಿದೆ. ಕಾರ್ಯಕರ್ತರು ಒಗ್ಗೂಡಿದಲ್ಲಿ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಬೆಳೆಯುತ್ತದೆ ಎಂದು ಹೇಳಿದರು.</p>.<p>ಜನವಿರೋಧಿ ಹಾಗೂ ರೈತ ವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ರಾಜ್ಯ ಸರ್ಕಾರದ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದಾರೆ. ಸರ್ಕಾರದ ವಿರುದ್ಧ ಇರುವ ಜನರ ಮನಸ್ಸನ್ನು ಗೆಲ್ಲುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಪ್ರಾಬಲ್ಯವನ್ನು ತೋರಬೇಕಿದೆ ಎಂದರು.</p>.<p>ಸಿ.ಬಿ ಸುರೇಶ್ ಬಾಬು ಮಾತನಾಡಿ, ಜೆಡಿಎಸ್ ಭದ್ರಕೋಟೆಯಾಗಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರು ನಿರಂತರ ಶ್ರಮಿಸಬೇಕಿದೆ. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಮರಳು ಮಾಡಲು ಮುಂದಾಗಿದೆ. ಆದರೆ ಸರ್ಕಾರದ ಜನ ವಿರೋಧಿ ನೀತಿಯಿಂದ ಜನರು ಬೇಸತ್ತಿದ್ದಾರೆ ಎಂದರು.</p>.<p>ಮುಖಂಡ ಬಿಎಸ್ ನಾಗರಾಜು ಮಾತನಾಡಿ, ಜೆಡಿಎಸ್ ಪಕ್ಷದಿಂದ ಎಲ್ಲಾ ಅಧಿಕಾರವನ್ನು ಅನುಭವಿಸಿ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ನಿರ್ನಾಮ ಮಾಡುತ್ತೇವೆ ಎಂದು ಹೇಳಿದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ತಾಲ್ಲೂಕಿನಲ್ಲಿ ನಿರಂತರವಾಗಿ ಅಧಿಕಾರ ಅನುಭವಿಸುತ್ತಿದ್ದರೂ ಅಭಿವೃದ್ಧಿ ಶೂನ್ಯವಾಗಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ತಾಲ್ಲೂಕಿನ ಅಭಿವೃದ್ಧಿಗಾಗಿ ಜೆಡಿಎಸ್ ಅನಿವಾರ್ಯ ಎಂಬುದನ್ನು ಜನರಲ್ಲಿ ಮನವರಿಗೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು.</p>.<p>ಮುಖಂಡ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ, ಮಾತಿಗಿಂತ ಪಕ್ಷ ಬಲವರ್ಧನೆ ಮಾಡುವತ್ತ ಎಲ್ಲರೂ ಗಮನಹರಿಸೋಣ. ಕಾರ್ಯಕರ್ತರ ಬೆಂಬಲಕ್ಕೆ ನಾಯಕರು ನಿಲ್ಲುತ್ತಿರುವುದರಿಂದ ತಾಲ್ಲೂಕಿನಲ್ಲಿ ಪಕ್ಷವನ್ನು ಸಮರ್ಥವಾಗಿ ಕಟ್ಟಲು ಸಾಧ್ಯವಾಗುವುದು ಎಂದು ಹೇಳಿದರು.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ ಅಂಜನಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕವೀರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಮುಖಂಡ ಬೆಟ್ಟಸ್ವಾಮಿ, ಹೊನ್ನಗಿರಿ ಗೌಡ, ಯೋಗಾನಂದ ಕುಮಾರ್, ಶಿವಲಿಂಗಯ್ಯ, ಕರಿಯಪ್ಪ, ಸುರೇಶ್ ಗೌಡ, ರಘು ಶಿವಾನಂದ, ಸಿದ್ದಗಂಗಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ‘ರಾಜ್ಯ ರಾಜಕೀಯದಲ್ಲಿ ಡಿಸೆಂಬರ್ ವೇಳೆಗೆ ಅನೇಕ ಬದಲಾವಣೆಗಳಾಗುವ ಸಾಧ್ಯತೆ ಇದೆ. ಆದರೆ ಯಾವ ರೀತಿ ಬದಲಾವಣೆ ಎಂದು ಹೇಳಲಾಗುವುದಿಲ್ಲ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.</p>.<p>ಸೋಮವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ರಾಜಕೀಯ ಯಾವಾಗ ಬೇಕಾದರೂ ತಿರುವು ಪಡೆದುಕೊಳ್ಳುವ ಸಾಧ್ಯತೆ ಇರುವುದರಿಂದ ಕಾರ್ಯಕರ್ತರು ಪರಿಸ್ಥಿತಿಯನ್ನು ಎದುರಿಸಲು ಸದಾ ಸಿದ್ಧರಿರಬೇಕು ಎಂದರು.</p>.<p>ದ್ವೇಷದ ರಾಜಕಾರಣ ಹೆಚ್ಚುಕಾಲ ನಡೆಯುವುದಿಲ್ಲ. ಜನರಿಗೆ ವಾಸ್ತವಿಕತೆ ಅರ್ಥವಾಗಿರುವುದರಿಂದ ತಿರುಗೇಟು ನೀಡಲು ಸಿದ್ಧರಿದ್ದಾರೆ. ಸರ್ಕಾರವು ದ್ವೇಷದ ರಾಜಕಾರಣವನ್ನು ಬದಿಗೊತ್ತಿ ಅಭಿವೃದ್ಧಿಯತ್ತ ಗಮನಹರಿಸುವಂತೆ ತಿಳಿಸಿದರು.</p>.<p>ಚುನಾವಣೆಗಳಲ್ಲಿ ಸೋಲು, ಗೆಲುವು ಸಾಮಾನ್ಯವಾಗಿದ್ದು ಅಧಿಕಾರಕ್ಕಿಂತ ಜನರ ಮಧ್ಯೆ ಇದ್ದುಕೊಂಡು ಕೆಲಸ ಮಾಡಿದ್ದಲ್ಲಿ ಜನರ ಮನಗೆಲ್ಲಲು ಸಾಧ್ಯ. ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಹೇಳಿದರು.</p>.<p>ರಾಜ್ಯದಾದ್ಯಂತ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರವಾಸ ಮಾಡಿ ಸದಸ್ಯತ್ವ ನೋಂದಣಿ ಮಾಡಿಸಲಾಗುವುದು. ಕಾರ್ಯಕರ್ತರು ಪಕ್ಷದ ಸಿದ್ಧಾಂತಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಸದಸ್ಯತ್ವ ಪಡೆದುಕೊಳ್ಳುವಂತೆ ಮಾಡಬೇಕಾಗಿದೆ. ಕಾರ್ಯಕರ್ತರು ಒಗ್ಗೂಡಿದಲ್ಲಿ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಬೆಳೆಯುತ್ತದೆ ಎಂದು ಹೇಳಿದರು.</p>.<p>ಜನವಿರೋಧಿ ಹಾಗೂ ರೈತ ವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ರಾಜ್ಯ ಸರ್ಕಾರದ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದಾರೆ. ಸರ್ಕಾರದ ವಿರುದ್ಧ ಇರುವ ಜನರ ಮನಸ್ಸನ್ನು ಗೆಲ್ಲುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಪ್ರಾಬಲ್ಯವನ್ನು ತೋರಬೇಕಿದೆ ಎಂದರು.</p>.<p>ಸಿ.ಬಿ ಸುರೇಶ್ ಬಾಬು ಮಾತನಾಡಿ, ಜೆಡಿಎಸ್ ಭದ್ರಕೋಟೆಯಾಗಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರು ನಿರಂತರ ಶ್ರಮಿಸಬೇಕಿದೆ. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಮರಳು ಮಾಡಲು ಮುಂದಾಗಿದೆ. ಆದರೆ ಸರ್ಕಾರದ ಜನ ವಿರೋಧಿ ನೀತಿಯಿಂದ ಜನರು ಬೇಸತ್ತಿದ್ದಾರೆ ಎಂದರು.</p>.<p>ಮುಖಂಡ ಬಿಎಸ್ ನಾಗರಾಜು ಮಾತನಾಡಿ, ಜೆಡಿಎಸ್ ಪಕ್ಷದಿಂದ ಎಲ್ಲಾ ಅಧಿಕಾರವನ್ನು ಅನುಭವಿಸಿ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ನಿರ್ನಾಮ ಮಾಡುತ್ತೇವೆ ಎಂದು ಹೇಳಿದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ತಾಲ್ಲೂಕಿನಲ್ಲಿ ನಿರಂತರವಾಗಿ ಅಧಿಕಾರ ಅನುಭವಿಸುತ್ತಿದ್ದರೂ ಅಭಿವೃದ್ಧಿ ಶೂನ್ಯವಾಗಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ತಾಲ್ಲೂಕಿನ ಅಭಿವೃದ್ಧಿಗಾಗಿ ಜೆಡಿಎಸ್ ಅನಿವಾರ್ಯ ಎಂಬುದನ್ನು ಜನರಲ್ಲಿ ಮನವರಿಗೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು.</p>.<p>ಮುಖಂಡ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ, ಮಾತಿಗಿಂತ ಪಕ್ಷ ಬಲವರ್ಧನೆ ಮಾಡುವತ್ತ ಎಲ್ಲರೂ ಗಮನಹರಿಸೋಣ. ಕಾರ್ಯಕರ್ತರ ಬೆಂಬಲಕ್ಕೆ ನಾಯಕರು ನಿಲ್ಲುತ್ತಿರುವುದರಿಂದ ತಾಲ್ಲೂಕಿನಲ್ಲಿ ಪಕ್ಷವನ್ನು ಸಮರ್ಥವಾಗಿ ಕಟ್ಟಲು ಸಾಧ್ಯವಾಗುವುದು ಎಂದು ಹೇಳಿದರು.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ ಅಂಜನಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕವೀರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಮುಖಂಡ ಬೆಟ್ಟಸ್ವಾಮಿ, ಹೊನ್ನಗಿರಿ ಗೌಡ, ಯೋಗಾನಂದ ಕುಮಾರ್, ಶಿವಲಿಂಗಯ್ಯ, ಕರಿಯಪ್ಪ, ಸುರೇಶ್ ಗೌಡ, ರಘು ಶಿವಾನಂದ, ಸಿದ್ದಗಂಗಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>