<p><strong>ತುರುವೇಕೆರೆ</strong>: ಜಿಲ್ಲೆಯಾದ್ಯಂತ ನಿತ್ಯ ₹8 ಲಕ್ಷ ಲೀಟರ್ಗೂ ಅಧಿಕ ಹಾಲನ್ನು ರೈತರು ಡೇರಿಗಳಿಗೆ ಮಾರಾಟ ಮಾಡುತ್ತಿದ್ದು, ಅವರಿಗೆ ತಿಂಗಳಿಗೆ ₹8 ಕೋಟಿ ಹಣ ಪಾವತಿಸಲಾಗುತ್ತಿದೆ ಎಂದು ಜಿಲ್ಲಾ ತುಮುಲ್ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ತಿಳಿಸಿದರು.</p>.<p>ಪಟ್ಟಣದ ವಿರಕ್ತ ಮಠದಲ್ಲಿ ನಡೆದ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಡೇರಿ, ಕ್ಯಾಲೆಂಡರ್ ವಿತರಣೆ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.</p>.<p>ಜಿಲ್ಲಾ ತುಮುಲ್ಗೆ ಗುಣಮಟ್ಟದ ಹಾಲನ್ನು ಹಾಕುವುದರಲ್ಲಿ ತುರುವೇಕೆರೆ ತಾಲ್ಲೂಕು ಪ್ರಥಮ ಸ್ಥಾನ ಪಡೆದಿದೆ. ಆ ಮೂಲಕ ಇತರೆ ತಾಲ್ಲೂಕುಗಳಿಗೂ ಮಾದರಿಯಾಗಿದೆ ಎಂದರು.</p>.<p>ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕಸುಬ್ರಾಯಭಟ್ ಮಾತನಾಡಿ, ‘ಹಾಲು ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ, ವಿದ್ಯಾರ್ಥಿಗಳ ಉನ್ನತ ವ್ಯಾಸಾಂಗಕ್ಕೆ ಸೇರಿದಂತೆ ವಿವಿಧ ಯೋಜನೆಗಳಿಗೆ ಜಿಲ್ಲಾ ಹಾಲು ಒಕ್ಕೂಟ ಆರ್ಥಿಕ ನೆರವು ನೀಡುತ್ತಾ ಬಂದಿದೆ’ ಎಂದರು.</p>.<p>ತಾಲ್ಲೂಕಿನ ಹಾಲು ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಹೊಸವರ್ಷದ ಕೊಡುಗೆಯಾಗಿ ಹಾಟ್ಬಾಕ್ಸ್, ಕ್ಯಾಲೆಂಡರ್, ತುಪ್ಪ, ಸಿಹಿ ಉತ್ಪನ್ನಗಳನ್ನು ನೀಡಲಾಯಿತು. 50ಕ್ಕೂ ಹೆಚ್ಚು ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹ ಧನ ನೀಡಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಬಿ.ಜಗದೀಶ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ಜಿಲ್ಲೆಯಾದ್ಯಂತ ನಿತ್ಯ ₹8 ಲಕ್ಷ ಲೀಟರ್ಗೂ ಅಧಿಕ ಹಾಲನ್ನು ರೈತರು ಡೇರಿಗಳಿಗೆ ಮಾರಾಟ ಮಾಡುತ್ತಿದ್ದು, ಅವರಿಗೆ ತಿಂಗಳಿಗೆ ₹8 ಕೋಟಿ ಹಣ ಪಾವತಿಸಲಾಗುತ್ತಿದೆ ಎಂದು ಜಿಲ್ಲಾ ತುಮುಲ್ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ತಿಳಿಸಿದರು.</p>.<p>ಪಟ್ಟಣದ ವಿರಕ್ತ ಮಠದಲ್ಲಿ ನಡೆದ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಡೇರಿ, ಕ್ಯಾಲೆಂಡರ್ ವಿತರಣೆ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.</p>.<p>ಜಿಲ್ಲಾ ತುಮುಲ್ಗೆ ಗುಣಮಟ್ಟದ ಹಾಲನ್ನು ಹಾಕುವುದರಲ್ಲಿ ತುರುವೇಕೆರೆ ತಾಲ್ಲೂಕು ಪ್ರಥಮ ಸ್ಥಾನ ಪಡೆದಿದೆ. ಆ ಮೂಲಕ ಇತರೆ ತಾಲ್ಲೂಕುಗಳಿಗೂ ಮಾದರಿಯಾಗಿದೆ ಎಂದರು.</p>.<p>ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕಸುಬ್ರಾಯಭಟ್ ಮಾತನಾಡಿ, ‘ಹಾಲು ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ, ವಿದ್ಯಾರ್ಥಿಗಳ ಉನ್ನತ ವ್ಯಾಸಾಂಗಕ್ಕೆ ಸೇರಿದಂತೆ ವಿವಿಧ ಯೋಜನೆಗಳಿಗೆ ಜಿಲ್ಲಾ ಹಾಲು ಒಕ್ಕೂಟ ಆರ್ಥಿಕ ನೆರವು ನೀಡುತ್ತಾ ಬಂದಿದೆ’ ಎಂದರು.</p>.<p>ತಾಲ್ಲೂಕಿನ ಹಾಲು ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಹೊಸವರ್ಷದ ಕೊಡುಗೆಯಾಗಿ ಹಾಟ್ಬಾಕ್ಸ್, ಕ್ಯಾಲೆಂಡರ್, ತುಪ್ಪ, ಸಿಹಿ ಉತ್ಪನ್ನಗಳನ್ನು ನೀಡಲಾಯಿತು. 50ಕ್ಕೂ ಹೆಚ್ಚು ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹ ಧನ ನೀಡಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಬಿ.ಜಗದೀಶ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>