<p><strong>ತುಮಕೂರು: </strong>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ನಮ್ಮ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ ಸ್ಪಷ್ಟಪಡಿಸಿದರು.</p>.<p>ಇಲ್ಲಿನ ಅಶೋಕ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಮನೆ ಮನೆಗೆ ತೆರಳಿ ಜನಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲು ಸಮಾರು ವರ್ಷಗಳಿಂದ ಹಲವಾರು ನಾಯಕರು ಪ್ರಯತ್ನಪಟ್ಟಿದ್ದಾರೆ. ಆದರೆ, ಆ ಕೆಲಸ ಈಗ ಸಾಧ್ಯವಾಗಿದೆ ಎಂದರು.</p>.<p>ಈ ಕಾಯ್ದೆ ಬಗ್ಗೆ ಮೊದಲು ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಲೋಕಸಭೆಯಲ್ಲಿ ಮಾತನಾಡಿದ್ದರು. ನರೇಂದ್ರ ಮೋದಿಯವರು ಈಗ ಈ ಕಾಯ್ದೆ ಜಾರಿಗೆ ತಂದಿದ್ದಾರೆ. ಏನೋ ಆಗೋಗುತ್ತದೆ ಎಂದು ಕಾಂಗ್ರೆಸ್ನವರು ಗುಲ್ಲೆಬ್ಬಿಸುತ್ತಿರುವುದರಲ್ಲಿ ಹುರುಳಿಲ್ಲ ಎಂದರು.</p>.<p>ಈ ಕಾಯ್ದೆಯಲ್ಲಿ ನಮ್ಮ ದೇಶದ ಮುಸ್ಲಿಮರನ್ನು ಓಡಿಸುವಂತಿಲ್ಲ. ಪಾಕಿಸ್ತಾನದಿಂದ ಯಾರೂ ಬರುವಂತಿಲ್ಲ ಅಷ್ಟೆ. ಹೀಗಿರುವಾಗ ಈ ಕಾಯ್ದೆ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಏಕೆ ಎಂದು ಅವರು ಪ್ರಶ್ನಿಸಿದರು.<br /><br />‘ಪಾಕಿಸ್ತಾನದಿಂದ ಬರುವವರೊಂದಿಗೆ ಬೇಕಾದಷ್ಟು ಮಂದಿ ಉಗ್ರಗಾಮಿಗಳು ಬಂದಿದ್ದಾರೆ. ಅಂಥವರಿಂದಲೇ ಗಲಭೆಗಳು ನಡೆಯುತ್ತಿವೆ. ನಾವು ಇಲ್ಲಿರುವ ಯಾರ ದಾಖಲಾತಿಯನ್ನೂ ಕೇಳಿಲ್ಲ, ಕೇಳುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ನಮ್ಮ ದೇಶವನ್ನು ಯಾವತ್ತೂ ಸಹ ಪಾಕಿಸ್ತಾನ ಮಾಡಲು ಸಾಧ್ಯವಿಲ್ಲ. ಹೊರಗಡೆಯಿಂದ ಬರುವವರನ್ನು ಸೇರಿಸುವ ಅವಶ್ಯಕತೆ ಇಲ್ಲ ಎಂಬುದು ಈ ಕಾಯ್ದೆಯ ಅಂಶವಾಗಿದೆ ಎಂದರು.</p>.<p>ದೇಶದ ಕಾನೂನಿಗೆ ಗೌರವ ಕೊಡುವಂತಹ ಮನೋಭಾವವನ್ನು ಎಲ್ಲರಲ್ಲೂ ಮೂಡಿಸುವ ಕೆಲಸ ಆಗಬೇಕಿದೆ. ದೇಶ ಭಾರತೀಯರಿಗೆ ಸೇರಿದ್ದು. ಪಾಕಿಸ್ತಾನ, ಆಫ್ಗಾನಿಸ್ಥಾನಕ್ಕೆ ಸೇರಿದ್ದಲ್ಲ. ಇದನ್ನು ಪ್ರತಿಯೊಬ್ಬ ನಾಗರಿಕರು ಅರ್ಥ ಮಾಡಿಕೊಂಡು ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು. ಯಾವುದೇ ಕಾರಣಕ್ಕೂ ಈ ಕಾಯ್ದೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. ಈ ಕಾಯ್ದೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಆಗಲಿದೆ ಎಂದರು.</p>.<p>ಶಾಸಕ ಜಿ.ಬಿ. ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಡಾ. ಹುಲಿನಾಯ್ಕರ್, ಪಾಲಿಕೆ ಸದಸ್ಯರಾದ ಸಿ.ಎನ್. ರಮೇಶ್, ಮಲ್ಲಿಕಾರ್ಜುನಯ್ಯ, ಶಿಪವ್ರಸಾದ್, ಲಕ್ಷ್ಮೀಶ್, ಕೊಪ್ಪಲ್ ನಾಗರಾಜು, ಡಾ. ಸಂಜಯನಾಯಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ನಮ್ಮ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ ಸ್ಪಷ್ಟಪಡಿಸಿದರು.</p>.<p>ಇಲ್ಲಿನ ಅಶೋಕ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಮನೆ ಮನೆಗೆ ತೆರಳಿ ಜನಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲು ಸಮಾರು ವರ್ಷಗಳಿಂದ ಹಲವಾರು ನಾಯಕರು ಪ್ರಯತ್ನಪಟ್ಟಿದ್ದಾರೆ. ಆದರೆ, ಆ ಕೆಲಸ ಈಗ ಸಾಧ್ಯವಾಗಿದೆ ಎಂದರು.</p>.<p>ಈ ಕಾಯ್ದೆ ಬಗ್ಗೆ ಮೊದಲು ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಲೋಕಸಭೆಯಲ್ಲಿ ಮಾತನಾಡಿದ್ದರು. ನರೇಂದ್ರ ಮೋದಿಯವರು ಈಗ ಈ ಕಾಯ್ದೆ ಜಾರಿಗೆ ತಂದಿದ್ದಾರೆ. ಏನೋ ಆಗೋಗುತ್ತದೆ ಎಂದು ಕಾಂಗ್ರೆಸ್ನವರು ಗುಲ್ಲೆಬ್ಬಿಸುತ್ತಿರುವುದರಲ್ಲಿ ಹುರುಳಿಲ್ಲ ಎಂದರು.</p>.<p>ಈ ಕಾಯ್ದೆಯಲ್ಲಿ ನಮ್ಮ ದೇಶದ ಮುಸ್ಲಿಮರನ್ನು ಓಡಿಸುವಂತಿಲ್ಲ. ಪಾಕಿಸ್ತಾನದಿಂದ ಯಾರೂ ಬರುವಂತಿಲ್ಲ ಅಷ್ಟೆ. ಹೀಗಿರುವಾಗ ಈ ಕಾಯ್ದೆ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಏಕೆ ಎಂದು ಅವರು ಪ್ರಶ್ನಿಸಿದರು.<br /><br />‘ಪಾಕಿಸ್ತಾನದಿಂದ ಬರುವವರೊಂದಿಗೆ ಬೇಕಾದಷ್ಟು ಮಂದಿ ಉಗ್ರಗಾಮಿಗಳು ಬಂದಿದ್ದಾರೆ. ಅಂಥವರಿಂದಲೇ ಗಲಭೆಗಳು ನಡೆಯುತ್ತಿವೆ. ನಾವು ಇಲ್ಲಿರುವ ಯಾರ ದಾಖಲಾತಿಯನ್ನೂ ಕೇಳಿಲ್ಲ, ಕೇಳುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ನಮ್ಮ ದೇಶವನ್ನು ಯಾವತ್ತೂ ಸಹ ಪಾಕಿಸ್ತಾನ ಮಾಡಲು ಸಾಧ್ಯವಿಲ್ಲ. ಹೊರಗಡೆಯಿಂದ ಬರುವವರನ್ನು ಸೇರಿಸುವ ಅವಶ್ಯಕತೆ ಇಲ್ಲ ಎಂಬುದು ಈ ಕಾಯ್ದೆಯ ಅಂಶವಾಗಿದೆ ಎಂದರು.</p>.<p>ದೇಶದ ಕಾನೂನಿಗೆ ಗೌರವ ಕೊಡುವಂತಹ ಮನೋಭಾವವನ್ನು ಎಲ್ಲರಲ್ಲೂ ಮೂಡಿಸುವ ಕೆಲಸ ಆಗಬೇಕಿದೆ. ದೇಶ ಭಾರತೀಯರಿಗೆ ಸೇರಿದ್ದು. ಪಾಕಿಸ್ತಾನ, ಆಫ್ಗಾನಿಸ್ಥಾನಕ್ಕೆ ಸೇರಿದ್ದಲ್ಲ. ಇದನ್ನು ಪ್ರತಿಯೊಬ್ಬ ನಾಗರಿಕರು ಅರ್ಥ ಮಾಡಿಕೊಂಡು ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು. ಯಾವುದೇ ಕಾರಣಕ್ಕೂ ಈ ಕಾಯ್ದೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. ಈ ಕಾಯ್ದೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಆಗಲಿದೆ ಎಂದರು.</p>.<p>ಶಾಸಕ ಜಿ.ಬಿ. ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಡಾ. ಹುಲಿನಾಯ್ಕರ್, ಪಾಲಿಕೆ ಸದಸ್ಯರಾದ ಸಿ.ಎನ್. ರಮೇಶ್, ಮಲ್ಲಿಕಾರ್ಜುನಯ್ಯ, ಶಿಪವ್ರಸಾದ್, ಲಕ್ಷ್ಮೀಶ್, ಕೊಪ್ಪಲ್ ನಾಗರಾಜು, ಡಾ. ಸಂಜಯನಾಯಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>