<p><strong>ತುಮಕೂರು: </strong>‘ಈ ದೇಶ ನಮಗೆ ಮಾತ್ರ ಇರಬೇಕು. ಯಾರು ಬೇಕಾದರೂ ಬಂದು ಹೋಗಲು ಭಾರತವೇನು ತೋಟದಪ್ಪನ ಛತ್ರವೇ’ ಎಂದು ಕಂದಾಯ ಸಚಿವ ಆರ್.ಅಶೋಕ ಪ್ರಶ್ನಿಸಿದರು.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ನಗರದಲ್ಲಿ ಭಾನುವಾರ ಬಿಜೆಪಿ ಹಮ್ಮಿಕೊಂಡಿದ್ದ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಸುಮಾರು 2 ಕೋಟಿ ಜನರು ಭಾರತಕ್ಕೆ ಬಂದು ವಾಸಿಸುತ್ತಿದ್ದಾರೆ. ಆ ದೇಶಗಳಿಂದ ಬಂದು ನಮ್ಮಲ್ಲಿ ನೆಲೆಸಿದ ಕಾರಣ ಮುಂದೊಂದು ದಿನ ನಮ್ಮ ಮಕ್ಕಳಿಗೆ ವಾಸಿಸಲು ಮನೆ, ಊಟ, ವಿದ್ಯಾಭ್ಯಾಸ ಸಿಗದಂತಹ ಪರಿಸ್ಥಿತಿ ಸೃಷ್ಟಿ ಆಗುವ ಆತಂಕ ಇದೆ’ ಎಂದರು.</p>.<p>ಪಾಕಿಸ್ತಾನದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ದೇಶ ವಿಭಜನೆಯ ನಂತರ ಹಿಂದೂಗಳನ್ನು ಅಲ್ಲಿ ಕೀಳಾಗಿ ಕಾಣಲಾಗುತ್ತಿದೆ. ಆ ನೋವು, ದಬ್ಬಾಳಿಕೆ ತಾಳದೆ ಭಾರತಕ್ಕೆ ಬಂದಿದ್ದಾರೆ. ಯಾವುದೇ ಪೌರತ್ವ ಇಲ್ಲದೆ 40 ವರ್ಷಗಳಿಂದ ಟೆಂಟ್ಗಳಲ್ಲಿ ವಾಸಿಸುತ್ತಿದ್ದಾರೆ. ಇಂತಹವರಿಗೆ ಪೌರತ್ವ ನೀಡಲಾಗುತ್ತದೆ ಎಂದರು.</p>.<p>ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ ಅನ್ಯದೇಶಗಳಿಂದ ಯಾರೂ ಬರುವಂತಿಲ್ಲ ಅಷ್ಟೇ. ಹೀಗಿರುವಾಗ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಈ ದೇಶ ನಮಗೆ ಮಾತ್ರ ಇರಬೇಕು. ಯಾರು ಬೇಕಾದರೂ ಬಂದು ಹೋಗಲು ಭಾರತವೇನು ತೋಟದಪ್ಪನ ಛತ್ರವೇ’ ಎಂದು ಕಂದಾಯ ಸಚಿವ ಆರ್.ಅಶೋಕ ಪ್ರಶ್ನಿಸಿದರು.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ನಗರದಲ್ಲಿ ಭಾನುವಾರ ಬಿಜೆಪಿ ಹಮ್ಮಿಕೊಂಡಿದ್ದ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಸುಮಾರು 2 ಕೋಟಿ ಜನರು ಭಾರತಕ್ಕೆ ಬಂದು ವಾಸಿಸುತ್ತಿದ್ದಾರೆ. ಆ ದೇಶಗಳಿಂದ ಬಂದು ನಮ್ಮಲ್ಲಿ ನೆಲೆಸಿದ ಕಾರಣ ಮುಂದೊಂದು ದಿನ ನಮ್ಮ ಮಕ್ಕಳಿಗೆ ವಾಸಿಸಲು ಮನೆ, ಊಟ, ವಿದ್ಯಾಭ್ಯಾಸ ಸಿಗದಂತಹ ಪರಿಸ್ಥಿತಿ ಸೃಷ್ಟಿ ಆಗುವ ಆತಂಕ ಇದೆ’ ಎಂದರು.</p>.<p>ಪಾಕಿಸ್ತಾನದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ದೇಶ ವಿಭಜನೆಯ ನಂತರ ಹಿಂದೂಗಳನ್ನು ಅಲ್ಲಿ ಕೀಳಾಗಿ ಕಾಣಲಾಗುತ್ತಿದೆ. ಆ ನೋವು, ದಬ್ಬಾಳಿಕೆ ತಾಳದೆ ಭಾರತಕ್ಕೆ ಬಂದಿದ್ದಾರೆ. ಯಾವುದೇ ಪೌರತ್ವ ಇಲ್ಲದೆ 40 ವರ್ಷಗಳಿಂದ ಟೆಂಟ್ಗಳಲ್ಲಿ ವಾಸಿಸುತ್ತಿದ್ದಾರೆ. ಇಂತಹವರಿಗೆ ಪೌರತ್ವ ನೀಡಲಾಗುತ್ತದೆ ಎಂದರು.</p>.<p>ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ ಅನ್ಯದೇಶಗಳಿಂದ ಯಾರೂ ಬರುವಂತಿಲ್ಲ ಅಷ್ಟೇ. ಹೀಗಿರುವಾಗ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>