<p><strong>ತುಮಕೂರು:</strong> ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಹಂತ–ಹಂತವಾಗಿ ನಡೆಸಿ, ವ್ಯವಸ್ಥಿತವಾಗಿ ಪೂರ್ಣಗೊಳಿಸಬೇಕು ಎಂದು ಮಾಜಿ ಶಾಸಕ ರಫೀಕ್ ಅಹ್ಮದ್ ಗುರುವಾರ ಒತ್ತಾಯಿಸಿದರು.</p>.<p>ಸ್ಮಾರ್ಟ್ ಸಿಟಿ ಕಾಮಗಾರಿಗಳಿಂದ ಈಗಾಗಲೇ ನಗರದಲ್ಲಿ ದೂಳು ತುಂಬಿಕೊಂಡಿದೆ. ಬೇಸಿಗೆ ಮುಗಿದು, ಮಳೆಗಾಲ ಆರಂಭವಾದರೆ ಇಡೀ ನಗರದ ತುಂಬ ಕೊಚ್ಚೆ ತುಂಬಿಕೊಳ್ಳುತ್ತದೆ. ಅಂತಹ ದುಸ್ಥಿತಿ ನಗರಕ್ಕೆ ಬರದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ವಹಿಸಬೇಕು ಎಂದುಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಗುತ್ತಿಗೆದಾರರು ಸರಿಯಾಗಿ ಕಾಮಗಾರಿಗಳನ್ನು ನಡೆಸದ ಕಾರಣ, ಅವರಿಗೆ ದಂಡ ವಿಧಿಸುವ ಸ್ಥಿತಿ ಬಂದಿದೆ. ಕುಡಿಯುವ ನೀರು ಸರಬರಾಜು, ಒಳಚರಂಡಿ ಮಂಡಳಿ ಮತ್ತು ಬೆಸ್ಕಾಂ ಸಂಸ್ಥೆಗಳು ಸಹ ಕಾರ್ಯನಿರ್ವಹಣೆಯಲ್ಲಿ ಎಡುವುತ್ತಿವೆ. ಇದನ್ನು ಸಹ ಸರಿಪಡಿಸಬೇಕು ಎಂದು ಹೇಳಿದರು.</p>.<p>ರಾಜ್ಯ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್ನಲ್ಲಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣವನ್ನು ನಿರ್ಲಕ್ಷ ಮಾಡಿದೆ. ಈ ವರ್ಗಗಳಿಗೆ ಸಿಗುತ್ತಿದ್ದ ಅನುದಾನದಲ್ಲಿ ₹1,500 ಕೋಟಿಯಷ್ಟು ಕಡಿತ ಮಾಡಲಾಗಿದೆ. ಇದರಿಂದ ಅಲ್ಪಸಂಖ್ಯಾತರ, ಹಿಂದುಗಳಿದ ಸಮುದಾಯಗಳ ಕಾಲೊನಿಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಗಳು ನನೆಗುದಿಗೆ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಬಜೆಟ್ ಬಳಿಕ ಕೃಷ್ಣ ಮೇಲ್ದಂಡೆ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಘೋಷಣೆ ಮಾಡಿದಂತೆ, ತುಮಕೂರು ಅಭಿವೃದ್ಧಿಗೂ ಹೆಚ್ಚುವರಿ ಅನುದಾನ ಮೀಸಲಿಡಬೇಕು. ಇಲ್ಲಿನ ರಸ್ತೆಗಳ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ಆಗ್ರಹಿಸಿದರು.</p>.<p>‘ನಾನು ಶಾಸಕನಾಗಿದ್ದಾಗ ಸರ್ಕಾರಿ ಜಮೀನು ಕಬಳಿಸಿದ್ದೇನೆಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಆಧಾರರಹಿತ ಆರೋಪ ಮಾಡಿದ್ದಾರೆ. ಅವರ ಬಳಿ ದಾಖಲೆ ಇದ್ದರೆ, ಮೊದಲು ಬಿಡುಗಡೆ ಮಾಡಲಿ’ ಎಂದು ಸವಾಲು ಹಾಕಿದರು.</p>.<p>***</p>.<p>ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗಿಂತ ಆರ್ಥಿಕ ಸ್ಥಿತಿ ಸುಧಾರಿಸಲು ಕೇಂದ್ರ ಸರ್ಕಾರ ಹೆಚ್ಚು ಗಮನ ಹರಿಸಲಿ<br /><strong>-ರಫೀಕ್ ಅಹ್ಮದ್, ಮಾಜಿ ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಹಂತ–ಹಂತವಾಗಿ ನಡೆಸಿ, ವ್ಯವಸ್ಥಿತವಾಗಿ ಪೂರ್ಣಗೊಳಿಸಬೇಕು ಎಂದು ಮಾಜಿ ಶಾಸಕ ರಫೀಕ್ ಅಹ್ಮದ್ ಗುರುವಾರ ಒತ್ತಾಯಿಸಿದರು.</p>.<p>ಸ್ಮಾರ್ಟ್ ಸಿಟಿ ಕಾಮಗಾರಿಗಳಿಂದ ಈಗಾಗಲೇ ನಗರದಲ್ಲಿ ದೂಳು ತುಂಬಿಕೊಂಡಿದೆ. ಬೇಸಿಗೆ ಮುಗಿದು, ಮಳೆಗಾಲ ಆರಂಭವಾದರೆ ಇಡೀ ನಗರದ ತುಂಬ ಕೊಚ್ಚೆ ತುಂಬಿಕೊಳ್ಳುತ್ತದೆ. ಅಂತಹ ದುಸ್ಥಿತಿ ನಗರಕ್ಕೆ ಬರದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ವಹಿಸಬೇಕು ಎಂದುಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಗುತ್ತಿಗೆದಾರರು ಸರಿಯಾಗಿ ಕಾಮಗಾರಿಗಳನ್ನು ನಡೆಸದ ಕಾರಣ, ಅವರಿಗೆ ದಂಡ ವಿಧಿಸುವ ಸ್ಥಿತಿ ಬಂದಿದೆ. ಕುಡಿಯುವ ನೀರು ಸರಬರಾಜು, ಒಳಚರಂಡಿ ಮಂಡಳಿ ಮತ್ತು ಬೆಸ್ಕಾಂ ಸಂಸ್ಥೆಗಳು ಸಹ ಕಾರ್ಯನಿರ್ವಹಣೆಯಲ್ಲಿ ಎಡುವುತ್ತಿವೆ. ಇದನ್ನು ಸಹ ಸರಿಪಡಿಸಬೇಕು ಎಂದು ಹೇಳಿದರು.</p>.<p>ರಾಜ್ಯ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್ನಲ್ಲಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣವನ್ನು ನಿರ್ಲಕ್ಷ ಮಾಡಿದೆ. ಈ ವರ್ಗಗಳಿಗೆ ಸಿಗುತ್ತಿದ್ದ ಅನುದಾನದಲ್ಲಿ ₹1,500 ಕೋಟಿಯಷ್ಟು ಕಡಿತ ಮಾಡಲಾಗಿದೆ. ಇದರಿಂದ ಅಲ್ಪಸಂಖ್ಯಾತರ, ಹಿಂದುಗಳಿದ ಸಮುದಾಯಗಳ ಕಾಲೊನಿಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಗಳು ನನೆಗುದಿಗೆ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಬಜೆಟ್ ಬಳಿಕ ಕೃಷ್ಣ ಮೇಲ್ದಂಡೆ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಘೋಷಣೆ ಮಾಡಿದಂತೆ, ತುಮಕೂರು ಅಭಿವೃದ್ಧಿಗೂ ಹೆಚ್ಚುವರಿ ಅನುದಾನ ಮೀಸಲಿಡಬೇಕು. ಇಲ್ಲಿನ ರಸ್ತೆಗಳ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ಆಗ್ರಹಿಸಿದರು.</p>.<p>‘ನಾನು ಶಾಸಕನಾಗಿದ್ದಾಗ ಸರ್ಕಾರಿ ಜಮೀನು ಕಬಳಿಸಿದ್ದೇನೆಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಆಧಾರರಹಿತ ಆರೋಪ ಮಾಡಿದ್ದಾರೆ. ಅವರ ಬಳಿ ದಾಖಲೆ ಇದ್ದರೆ, ಮೊದಲು ಬಿಡುಗಡೆ ಮಾಡಲಿ’ ಎಂದು ಸವಾಲು ಹಾಕಿದರು.</p>.<p>***</p>.<p>ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗಿಂತ ಆರ್ಥಿಕ ಸ್ಥಿತಿ ಸುಧಾರಿಸಲು ಕೇಂದ್ರ ಸರ್ಕಾರ ಹೆಚ್ಚು ಗಮನ ಹರಿಸಲಿ<br /><strong>-ರಫೀಕ್ ಅಹ್ಮದ್, ಮಾಜಿ ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>