<p><strong>ತುಮಕೂರು</strong>: ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಾಟ ಮಾಡಲು ಅ. 1ರಿಂದ ರೈತರ ನೋಂದಣಿ ಆರಂಭವಾಗಿದೆ.</p>.<p>ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್ಗೆ ₹4,886 ನಿಗದಿಪಡಿಸಲಾಗಿದೆ. ನೋಂದಣಿ ಮಾಡಿಸಲು ಡಿಸೆಂಬರ್ 15ರ ವರೆಗೆ ಕಾಲಾವಕಾಶವಿದೆ. 2026ನೇ ಜನವರಿ 1ರಿಂದ ಮಾರ್ಚ್ 31ರ ವರೆಗೆ ರಾಗಿ ಖರೀದಿ ನಡೆಯಲಿದೆ.</p>.<p>11 ನೋಂದಣಿ ಕೇಂದ್ರ: ಚಿಕ್ಕನಾಯಕನಹಳ್ಳಿ ಹೊಸ ಸರ್ಕಾರಿ ಆಸ್ಪತ್ರೆ ಹಿಂಭಾಗ ಇರುವ ಎಪಿಎಂಸಿ ಗೋದಾಮು, ಹುಳಿಯಾರು ಎಪಿಎಂಸಿ, ಕುಣಿಗಲ್ ಎಪಿಎಂಸಿ (2 ಕೇಂದ್ರ), ತಿಪಟೂರು ಎಪಿಎಂಸಿ, ತುರುವೇಕೆರೆ ಎಪಿಎಂಸಿ, ಗುಬ್ಬಿ ಎಪಿಎಂಸಿ, ಮಧುಗಿರಿ ಎಪಿಎಂಸಿ, ಶಿರಾ ಎಪಿಎಂಸಿ, ಕೊರಟಗೆರೆ ಅಕ್ಕಿರಾಂಪುರ ಪಿಡಿಎಸ್ ಗೋದಾಮು, ತುಮಕೂರು ಬಟವಾಡಿ ಎಪಿಎಂಸಿ ಗೋದಾಮಿನಲ್ಲಿ ರೈತರು ನೋಂದಣಿ ಮಾಡಿಸಬಹುದು.</p>.<p>ನಗರದಲ್ಲಿ ಶನಿವಾರ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ನಡೆಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ನೋಂದಣಿಗೆ ಅಗತ್ಯ ಕ್ರಮಕ್ಕೆ ನಿರ್ದೇಶಿಸಿದರು. ಆಹಾರ ಇಲಾಖೆ ಜಂಟಿ ನಿರ್ದೇಶಕಿ ಸೌಮ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಎಪಿಎಂಸಿ ಉಪನಿರ್ದೇಶಕ ರಾಜಣ್ಣ, ಕರ್ನಾಟಕ ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ ತನ್ವೀರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಾಟ ಮಾಡಲು ಅ. 1ರಿಂದ ರೈತರ ನೋಂದಣಿ ಆರಂಭವಾಗಿದೆ.</p>.<p>ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್ಗೆ ₹4,886 ನಿಗದಿಪಡಿಸಲಾಗಿದೆ. ನೋಂದಣಿ ಮಾಡಿಸಲು ಡಿಸೆಂಬರ್ 15ರ ವರೆಗೆ ಕಾಲಾವಕಾಶವಿದೆ. 2026ನೇ ಜನವರಿ 1ರಿಂದ ಮಾರ್ಚ್ 31ರ ವರೆಗೆ ರಾಗಿ ಖರೀದಿ ನಡೆಯಲಿದೆ.</p>.<p>11 ನೋಂದಣಿ ಕೇಂದ್ರ: ಚಿಕ್ಕನಾಯಕನಹಳ್ಳಿ ಹೊಸ ಸರ್ಕಾರಿ ಆಸ್ಪತ್ರೆ ಹಿಂಭಾಗ ಇರುವ ಎಪಿಎಂಸಿ ಗೋದಾಮು, ಹುಳಿಯಾರು ಎಪಿಎಂಸಿ, ಕುಣಿಗಲ್ ಎಪಿಎಂಸಿ (2 ಕೇಂದ್ರ), ತಿಪಟೂರು ಎಪಿಎಂಸಿ, ತುರುವೇಕೆರೆ ಎಪಿಎಂಸಿ, ಗುಬ್ಬಿ ಎಪಿಎಂಸಿ, ಮಧುಗಿರಿ ಎಪಿಎಂಸಿ, ಶಿರಾ ಎಪಿಎಂಸಿ, ಕೊರಟಗೆರೆ ಅಕ್ಕಿರಾಂಪುರ ಪಿಡಿಎಸ್ ಗೋದಾಮು, ತುಮಕೂರು ಬಟವಾಡಿ ಎಪಿಎಂಸಿ ಗೋದಾಮಿನಲ್ಲಿ ರೈತರು ನೋಂದಣಿ ಮಾಡಿಸಬಹುದು.</p>.<p>ನಗರದಲ್ಲಿ ಶನಿವಾರ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ನಡೆಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ನೋಂದಣಿಗೆ ಅಗತ್ಯ ಕ್ರಮಕ್ಕೆ ನಿರ್ದೇಶಿಸಿದರು. ಆಹಾರ ಇಲಾಖೆ ಜಂಟಿ ನಿರ್ದೇಶಕಿ ಸೌಮ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಎಪಿಎಂಸಿ ಉಪನಿರ್ದೇಶಕ ರಾಜಣ್ಣ, ಕರ್ನಾಟಕ ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ ತನ್ವೀರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>