ತುಮಕೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಿದ್ಧಗಂಗಾ ಮಠಕ್ಕೆ ಗುರುವಾರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದರು.
ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮ ಶುಕ್ರವಾರ ನಡೆಯಲಿದ್ದು, ಅದಕ್ಕೂ ಮೊದಲೇ ಗುರುವಾರ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದು, ಕೆಲಹೊತ್ತು ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ಡಾ.ಜಿ.ಪರಮೇಶ್ವರ ಉಪಸ್ಥಿತರಿದ್ದರು.