ತಾಲ್ಲೂಕಿನ ಮಿಡಿಗೇಶಿ ಹಾಗೂ ಐ.ಡಿ.ಹಳ್ಳಿ ಹೋಬಳಿಯಲ್ಲಿ ಶೇಂಗಾ, ರಾಗಿ, ಅವರೆ, ಮೆಕ್ಕೆಜೋಳ ಬೆಳೆಗಳು ಮಳೆಯಿಲ್ಲದೇ ಒಣಗುವ ಹಂತ ತಲುಪಿದ್ದವು. ಸೋಮವಾರ ರಾತ್ರಿ ಸುರಿದ ಮಳೆಯಿಂದಾಗಿ ಬೆಳೆಗಳಿಗೆ ಜೀವ ಕಳೆ ಬಂದಿದೆ.
ಚೋಳೇನಹಳ್ಳಿ, ಬಿದರಕೆರೆ, ಮಿಡಿಗೇಶಿ, ರೆಡ್ಡಿಹಳ್ಳಿ, ಹನುಮಂತಪುರ, ಬೇಡತ್ತೂರು, ಹೊಸಕೆರೆ ಗ್ರಾಮದ ಕೆರೆ ಹಾಗೂ ಕಟ್ಟೆಗಳಿಗೆ ನೀರು ಹರಿದಿದೆ.
ಪಟ್ಟಣದ ಪಾವಗಡ ರಸ್ತೆಯಲ್ಲಿ ಮಳೆಯಿಂದಾಗಿ ರಸ್ತೆ ಮಧ್ಯಭಾಗದಲ್ಲಿ ಗುಂಡಿ ಬಿದ್ದಿದೆ. ಸಾರ್ವಜನಿಕರು ಮರದ ಕೊಂಬೆಗಳನ್ನು ರಸ್ತೆಯಲ್ಲಿ ಇಟ್ಟು ಸರಿಪಡಿಸುವಂತೆ ಆಗ್ರಹಿಸಿದ್ದಾರೆ.