ಬಿರುಗಾಳಿ ರಭಸಕ್ಕೆ ಇಬ್ಬರು ರೈತರ ಮನೆಯ ಮೇಲಿನ ಶೀಟ್ಗಳು ಕೂಡ ಹಾರಿ ಹೋಗಿವೆ. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಹೊನ್ನಾರನಹಳ್ಳಿ (ರಾಜಯ್ಯನಪಾಳ್ಯ) ಗ್ರಾಮದ ರೈತ ಜೋಗಪ್ಪ ಎಂಬುವರ 1 ಎಕರೆ 20 ಗುಂಟೆ ಬಾಳೆ ತೋಟದಲ್ಲಿ 600ಕ್ಕೂ ಹೆಚ್ಚು ಬಾಳೆಗಿಡಗಳು ಬಿರುಗಾಳಿಯಿಂದ ನಾಶವಾಗಿವೆ. ₹ 60 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ. ಇದೇ ಗ್ರಾಮದ ನಾಗಣ್ಣ ಎಂಬುವರ ಮನೆಯ 3 ಶೀಟ್ಗಳು ಗಾಳಿಗೆ ಹಾರಿಹೋಗಿವೆ.