<p><strong>ತುಮಕೂರು: </strong>ತುಮಕೂರು ನಗರ ಸೇರಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಹದವಾದ ಮಳೆ ಮುಂದುವರಿದಿದೆ. ಕಳೆದ ಎರಡುಮೂರು ದಿನಗಳಿಂದಲೂ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಮೂರು ದಿನಗಳ ಹಿಂದೆ ಮಧುಗಿರಿ ತಾಲ್ಲೂಕಿನ ಬೇಡತ್ತೂರಿನಲ್ಲಿ ಸುರಿದ ಮಳೆ ಇಡೀ ರಾಜ್ಯದಲ್ಲಿಯೇ ಅತಿ ಹೆಚ್ಚು ಎನಿಸಿತ್ತು.</p>.<p>ಬುಧವಾರ ರಾತ್ರಿಯೂ ತುಮಕೂರು ನಗರದಲ್ಲಿ ಉತ್ತಮ ಮಳೆ ಸುರಿಯಿತು. ರಾತ್ರಿ ಆರಂಭವಾದ ಮಳೆ ಬೆಳಗಿನ ಜಾವದವರೆಗೂ ಮುಂದುವರಿಯಿತು. ಮತ್ತೆ ಗುರುವಾರ ಮಧ್ಯಾಹ್ನ ಮತ್ತು ಸಂಜೆಯೂ ಹದವಾದ ಮಳೆ ಬಿತ್ತು.</p>.<p>ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು, ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ, ತುಮಕೂರು ತಾಲ್ಲೂಕು ಕೋರ, ಗುಬ್ಬಿ ತಾಲ್ಲೂಕು ಹಾಗಲವಾಡಿ ಭಾಗದಲ್ಲಿ ಉತ್ತಮ ಮಳೆ ಸುರಿಯಿತು. ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.</p>.<p>ನಗರದಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಹಲವು ಕಡೆಗಳಲ್ಲಿ ರಸ್ತೆಯನ್ನು ಅಗೆಯಲಾಗಿದೆ. ಮಳೆ ಸುರಿದ ಕಾರಣ ಈ ರಸ್ತೆಗಳು ಕೆಸರು ಗದ್ದೆಯಂತೆ ಆದವು. ಬೈಕ್ ಸವಾರರು ಕಷ್ಟಪಟ್ಟು ಸಾಗಿದರು. ಪಾದಚಾರಿಗಳು ಎಲ್ಲಿ ಕೆಸರು ಸಿಡಿಯುತ್ತದೆ ಎನ್ನುವ ಭಯದಲ್ಲಿ ಸಂಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ತುಮಕೂರು ನಗರ ಸೇರಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಹದವಾದ ಮಳೆ ಮುಂದುವರಿದಿದೆ. ಕಳೆದ ಎರಡುಮೂರು ದಿನಗಳಿಂದಲೂ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಮೂರು ದಿನಗಳ ಹಿಂದೆ ಮಧುಗಿರಿ ತಾಲ್ಲೂಕಿನ ಬೇಡತ್ತೂರಿನಲ್ಲಿ ಸುರಿದ ಮಳೆ ಇಡೀ ರಾಜ್ಯದಲ್ಲಿಯೇ ಅತಿ ಹೆಚ್ಚು ಎನಿಸಿತ್ತು.</p>.<p>ಬುಧವಾರ ರಾತ್ರಿಯೂ ತುಮಕೂರು ನಗರದಲ್ಲಿ ಉತ್ತಮ ಮಳೆ ಸುರಿಯಿತು. ರಾತ್ರಿ ಆರಂಭವಾದ ಮಳೆ ಬೆಳಗಿನ ಜಾವದವರೆಗೂ ಮುಂದುವರಿಯಿತು. ಮತ್ತೆ ಗುರುವಾರ ಮಧ್ಯಾಹ್ನ ಮತ್ತು ಸಂಜೆಯೂ ಹದವಾದ ಮಳೆ ಬಿತ್ತು.</p>.<p>ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು, ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ, ತುಮಕೂರು ತಾಲ್ಲೂಕು ಕೋರ, ಗುಬ್ಬಿ ತಾಲ್ಲೂಕು ಹಾಗಲವಾಡಿ ಭಾಗದಲ್ಲಿ ಉತ್ತಮ ಮಳೆ ಸುರಿಯಿತು. ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.</p>.<p>ನಗರದಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಹಲವು ಕಡೆಗಳಲ್ಲಿ ರಸ್ತೆಯನ್ನು ಅಗೆಯಲಾಗಿದೆ. ಮಳೆ ಸುರಿದ ಕಾರಣ ಈ ರಸ್ತೆಗಳು ಕೆಸರು ಗದ್ದೆಯಂತೆ ಆದವು. ಬೈಕ್ ಸವಾರರು ಕಷ್ಟಪಟ್ಟು ಸಾಗಿದರು. ಪಾದಚಾರಿಗಳು ಎಲ್ಲಿ ಕೆಸರು ಸಿಡಿಯುತ್ತದೆ ಎನ್ನುವ ಭಯದಲ್ಲಿ ಸಂಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>