ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ನಿಲಯದ ಮೇಲ್ವಿಚಾರಕರು ಫಲಿತಾಂಶ ವೃದ್ಧಿಸುವ ನಿಟ್ಟಿನಲ್ಲಿ ಜಿಲ್ಲೆಯ ತುಮಕೂರು-1, ಚಿಕ್ಕನಾಯಕನಹಳ್ಳಿ-2, ಗುಬ್ಬಿ-1, ಕುಣಿಗಲ್-1, ಪಾವಗಡ-4, ಮಧುಗಿರಿ-1, ಕೊರಟಗೆರೆ-1, ತುರುವೇಕೆರೆ-1, ಶಿರಾ-3, ತಿಪಟೂರು-1 ತಾಲ್ಲೂಕು ಕೇಂದ್ರಗಳಲ್ಲಿ ಆಯ್ದ ವಿದ್ಯಾರ್ಥಿನಿಲಯಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಂದರಂತೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು. ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದರು.