ನಾನು ಈ ಜೀವಮಾನದಲ್ಲಿ ಎಂದೂ ಮಹಿಳೆಯರ ಬಗ್ಗೆ ಅಗೌರವಯುತವಾಗಿ ನಡೆದುಕೊಂಡಿಲ್ಲ. ನಾನು ನಿರಂತರವಾಗಿ ಎಲ್ಲ ಜಾತಿಯ ಬಡವರ ಪರವಾಗಿ ಅವರ ಅಭ್ಯುದಯಕ್ಕಾಗಿ, ಬಡವರ ಸ್ವಾಭಿಮಾನ ಹಾಗೂ ಸ್ವಾವಲಂಬಿ ಜೀವನ ನಡೆಸುವ ವ್ಯವಸ್ಥೆ ಸೃಷ್ಟಿಸುವ ಬದ್ಧತೆಯ ರಾಜಕಾರಣ ಮಾಡುತ್ತಿದ್ದೇನೆ. ಅಂತಿಮವಾಗಿ ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಎಲ್ಲ ಕಹಿ ಸಂಗತಿಗಳನ್ನು ಮರೆತು ಒಂದಾಗಿ ಪಕ್ಷ ಕಟ್ಟೋಣ ಎಂದು ರಾಜಣ್ಣ ಹೇಳಿಕೆಯಲ್ಲಿ ತಿಳಿಸಿದ್ದಾರೆ.