<p><strong>ತುಮಕೂರು</strong>: ಹಿರಿಯ ರಾಜಕಾರಣಿ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ಜನ್ಮ ದಿನದ ಪ್ರಯುಕ್ತ ‘ಅಮೃತ ಮಹೋತ್ಸವ’ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಜೂನ್ 21ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಈ ಬಗ್ಗೆ ಮಾಹಿತಿ ನೀಡಿದರು. ಅಭಿನಂದನಾ ಗ್ರಂಥವು ರಾಜಣ್ಣ ಅವರ ಬಾಲ್ಯ, ವಿದ್ಯಾಭ್ಯಾಸ, ಸಹಕಾರ ಕ್ಷೇತ್ರಕ್ಕೆ ನೀಡಿದ ಕೊಡುಗೆ, ರಾಜಕಾರಣ, ಅಭಿವೃದ್ಧಿ ವಿಚಾರಗಳನ್ನು ಒಳಗೊಂಡಿದೆ ಎಂದರು.</p>.<p>ಅಮೃತ ಮಹೋತ್ಸವ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನ ಮಾಡುತ್ತಿಲ್ಲ. ರಾಜಣ್ಣ ಸ್ನೇಹಿತರು ಸೇರಿಕೊಂಡು ಕಾರ್ಯಕ್ರಮ ಆಯೋಜಿಸಿದ್ದಾರೆ. ರಾಜ್ಯದ ವಿವಿಧೆಡೆಗಳಿಂದ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಸಚಿವ ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಾಹಿತಿ ಬರಗೂರು ರಾಮಚಂದ್ರಪ್ಪ ಆಶಯ ನುಡಿಗಳನ್ನಾಡುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ವಿ.ಸೋಮಣ್ಣ ಮೊದಲಾದವರು ಭಾಗವಹಿಸುವರು ಎಂದರು.</p>.<p>ಪ್ರಮುಖರಾದ ಕಲ್ಲಹಳ್ಳಿ ದೇವರಾಜು, ಟಿ.ಆರ್.ಆಂಜಿನಪ್ಪ, ಬಾ.ಹ.ರಮಾಕುಮಾರಿ, ಟಿ.ಪಿ.ಮಂಜುನಾಥ್, ಧನಿಯಕುಮಾರ್, ಟಿ.ಮುರುಳಿಕೃಷ್ಣಪ್ಪ, ಎಂ.ಎಚ್.ನಾಗರಾಜು, ಲಕ್ಷ್ಮಿನಾರಾಯಣ್, ಗುರುಮೂರ್ತಿ, ಜಂಗಮಪ್ಪ, ಬಿ.ಸಿ.ಶೈಲಾನಾಗರಾಜು, ಪಿ.ಆರ್.ನಾರಾಯಣಗೌಡ, ಎನ್.ಗಂಗಣ್ಣ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಹಿರಿಯ ರಾಜಕಾರಣಿ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ಜನ್ಮ ದಿನದ ಪ್ರಯುಕ್ತ ‘ಅಮೃತ ಮಹೋತ್ಸವ’ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಜೂನ್ 21ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಈ ಬಗ್ಗೆ ಮಾಹಿತಿ ನೀಡಿದರು. ಅಭಿನಂದನಾ ಗ್ರಂಥವು ರಾಜಣ್ಣ ಅವರ ಬಾಲ್ಯ, ವಿದ್ಯಾಭ್ಯಾಸ, ಸಹಕಾರ ಕ್ಷೇತ್ರಕ್ಕೆ ನೀಡಿದ ಕೊಡುಗೆ, ರಾಜಕಾರಣ, ಅಭಿವೃದ್ಧಿ ವಿಚಾರಗಳನ್ನು ಒಳಗೊಂಡಿದೆ ಎಂದರು.</p>.<p>ಅಮೃತ ಮಹೋತ್ಸವ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನ ಮಾಡುತ್ತಿಲ್ಲ. ರಾಜಣ್ಣ ಸ್ನೇಹಿತರು ಸೇರಿಕೊಂಡು ಕಾರ್ಯಕ್ರಮ ಆಯೋಜಿಸಿದ್ದಾರೆ. ರಾಜ್ಯದ ವಿವಿಧೆಡೆಗಳಿಂದ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಸಚಿವ ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಾಹಿತಿ ಬರಗೂರು ರಾಮಚಂದ್ರಪ್ಪ ಆಶಯ ನುಡಿಗಳನ್ನಾಡುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ವಿ.ಸೋಮಣ್ಣ ಮೊದಲಾದವರು ಭಾಗವಹಿಸುವರು ಎಂದರು.</p>.<p>ಪ್ರಮುಖರಾದ ಕಲ್ಲಹಳ್ಳಿ ದೇವರಾಜು, ಟಿ.ಆರ್.ಆಂಜಿನಪ್ಪ, ಬಾ.ಹ.ರಮಾಕುಮಾರಿ, ಟಿ.ಪಿ.ಮಂಜುನಾಥ್, ಧನಿಯಕುಮಾರ್, ಟಿ.ಮುರುಳಿಕೃಷ್ಣಪ್ಪ, ಎಂ.ಎಚ್.ನಾಗರಾಜು, ಲಕ್ಷ್ಮಿನಾರಾಯಣ್, ಗುರುಮೂರ್ತಿ, ಜಂಗಮಪ್ಪ, ಬಿ.ಸಿ.ಶೈಲಾನಾಗರಾಜು, ಪಿ.ಆರ್.ನಾರಾಯಣಗೌಡ, ಎನ್.ಗಂಗಣ್ಣ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>