<p><strong>ತುಮಕೂರು</strong>: ಸಚಿವ ಜಿ.ಪರಮೇಶ್ವರ ಅವರನ್ನು ತೇಜೋವಧೆ ಮಾಡಿರುವ ಶಾಸಕ ಬಿ.ಸುರೇಶ್ಗೌಡ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಕ್ಷಮೆ ಕೇಳಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಲ್ಲಿ ಶನಿವಾರ ಆಗ್ರಹಿಸಿದರು.</p>.<p>ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಈವರೆಗೂ ಯಾವುದೇ ರೀತಿಯಲ್ಲೂ ಗಲಭೆಗಳಾಗಿಲ್ಲ. ಇಂತಹ ಸುಸಂಸ್ಕೃತ ಕ್ಷೇತ್ರ ಪ್ರತಿನಿಧಿಸುವ ಶಾಸಕರು, ಕ್ಷೇತ್ರದ ಮರ್ಯಾದೆ ತೆಗೆಯುವ ಕೆಲಸ ಮಾಡಬಾರದು. ಗೌರವ ಉಳಿಸಿಕೊಳ್ಳಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಸಲಹೆ ಮಾಡಿದರು.</p>.<p>ವೈಯಕ್ತಿಕ ಆರೋಪ, ಸೇಡಿನ ರಾಜಕಾರಣ ಬಿಡಬೇಕು. ಶಾಸಕ ಸುರೇಶ್ಗೌಡ ಅವರಿಗೆ ತಾಳ್ಮೆ ಇರಬೇಕು. ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಯಾರಿಗೂ ನೋವಾಗದಂತೆ, ತೇಜೋವಧೆ ಮಾಡುವ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂದು ಇಬ್ಬರೂ ನಾಯಕರಿಗೆ ಕಿವಿಮಾತು ಹೇಳಿದರು.</p>.<p>‘ಎಲ್ಲರೂ ಹೊಂದಾಣಿಕೆ ರಾಜಕಾರಣಿಗಳೇ. ಹೊಂದಾಣಿಕೆ ಮಾಡಿಕೊಳ್ಳದ ರಾಜಕಾರಣಿಗಳು ಯಾರಿದ್ದಾರೆ? ಸುರೇಶ್ಗೌಡ, ಗೌರಿಶಂಕರ್ ಗೆಲುವಿಗೆ ಸಹಾಯ ಮಾಡಿದ್ದೇನೆ. ಉಪಕಾರಕ್ಕೆ ಪ್ರತ್ಯುಪಕಾರ ಮಾಡಿರುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸಚಿವ ಜಿ.ಪರಮೇಶ್ವರ ಅವರನ್ನು ತೇಜೋವಧೆ ಮಾಡಿರುವ ಶಾಸಕ ಬಿ.ಸುರೇಶ್ಗೌಡ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಕ್ಷಮೆ ಕೇಳಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಲ್ಲಿ ಶನಿವಾರ ಆಗ್ರಹಿಸಿದರು.</p>.<p>ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಈವರೆಗೂ ಯಾವುದೇ ರೀತಿಯಲ್ಲೂ ಗಲಭೆಗಳಾಗಿಲ್ಲ. ಇಂತಹ ಸುಸಂಸ್ಕೃತ ಕ್ಷೇತ್ರ ಪ್ರತಿನಿಧಿಸುವ ಶಾಸಕರು, ಕ್ಷೇತ್ರದ ಮರ್ಯಾದೆ ತೆಗೆಯುವ ಕೆಲಸ ಮಾಡಬಾರದು. ಗೌರವ ಉಳಿಸಿಕೊಳ್ಳಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಸಲಹೆ ಮಾಡಿದರು.</p>.<p>ವೈಯಕ್ತಿಕ ಆರೋಪ, ಸೇಡಿನ ರಾಜಕಾರಣ ಬಿಡಬೇಕು. ಶಾಸಕ ಸುರೇಶ್ಗೌಡ ಅವರಿಗೆ ತಾಳ್ಮೆ ಇರಬೇಕು. ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಯಾರಿಗೂ ನೋವಾಗದಂತೆ, ತೇಜೋವಧೆ ಮಾಡುವ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂದು ಇಬ್ಬರೂ ನಾಯಕರಿಗೆ ಕಿವಿಮಾತು ಹೇಳಿದರು.</p>.<p>‘ಎಲ್ಲರೂ ಹೊಂದಾಣಿಕೆ ರಾಜಕಾರಣಿಗಳೇ. ಹೊಂದಾಣಿಕೆ ಮಾಡಿಕೊಳ್ಳದ ರಾಜಕಾರಣಿಗಳು ಯಾರಿದ್ದಾರೆ? ಸುರೇಶ್ಗೌಡ, ಗೌರಿಶಂಕರ್ ಗೆಲುವಿಗೆ ಸಹಾಯ ಮಾಡಿದ್ದೇನೆ. ಉಪಕಾರಕ್ಕೆ ಪ್ರತ್ಯುಪಕಾರ ಮಾಡಿರುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>