ಕೆಪಿಸಿಸಿ ಕ್ರಮ ಸರಿಯಾಗಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಳೆಸಿದವರು ಈ ಬ್ಲಾಕ್ ಕಾಂಗ್ರೆಸ್ ನಂಥಹ ಅಧ್ಯಕ್ಷರು, ಕಾರ್ಯಕರ್ತರೇ. ಅವರ ಶ್ರಮ, ನಿಷ್ಠೆ ಗಮನಿಸದೇ ನಿಷ್ಠಾವಂತರನ್ನು ಉಚ್ಚಾಟನೆ ಮಾಡಿದ್ದು ಸರಿಯಲ್ಲ. ಈ ಆದೇಶ ಹಿಂದಕ್ಕೆ ಪಡೆಯದಿದ್ದರೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪುರಸಭೆ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಮಧುಗಿರಿಯಲ್ಲಿ ಕಾಂಗ್ರೆಸ್ ಶೂನ್ಯ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.