ರಾಜ್ಯದಲ್ಲಿ ಈವರೆಗೆ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗಳು ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದವು. ಆದರೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ವರದಿ ಪಡೆದು ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡಬೇಕು ಎಂದು ಸರ್ಕಾರ ಹೊಸದಾಗಿ ಆದೇಶಿಸಿದೆ. ಕೊಡಗು ಹಾಗೂ ಕೆಲ ಜಿಲ್ಲೆಗಳಲ್ಲಿ ಕಾಡು ಕುರುಬ, ಜೇನು ಕುರುಬ ಸೇರಿದಂತೆ ಕುರುಬರ ಐದು ಪಂಗಡಗಳಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ನೀಡಲಾಗುತ್ತಿದೆ. ಈ ಹೊಸ ಆದೇಶದಿಂದ ಸಮಸ್ಯೆಯಾಗಲಿದ್ದು, ಹಿಂದೆ ಇದ್ದ ನಿಯಮವನ್ನೇ ಅನುಸರಿಸಬೇಕು ಎಂದು ಒತ್ತಾಯಿಸಿದರು.