ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಶಾಮಿಯಾನ ಹಾಕಿ ವಿಶೇಷ ಪೂಜೆ ನಡೆಸಿ, ಪಾನಕ, ಮಜ್ಜಿಗೆ, ಹೆಸರು ಬೇಳೆ ಹಂಚಲಾಗುತ್ತಿತ್ತು. ಹಸಿರು ತಳಿರು ತೋರಣಗಳನ್ನು ಕಟ್ಟಲಾಗುತ್ತಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುತ್ತಿದ್ದವು. ಲಾಕ್ಡೌನ್ ಇರುವುದರಿಂದ ಸಾಧ್ಯವಾಗಿಲ್ಲ ಎಂದು ಮಹಾಲಕ್ಷ್ಮಿ ದೇವಾಲಯದ ಅರ್ಚಕ ಚಂದನ್ ಹೇಳಿದರು.