<p>ಕುದೂರು: ತಾಲ್ಲೂಕಿನ ಕುದೂರು ಹೋಬಳಿ ಕೆಂಪಾಪುರ ಗ್ರಾಮದಲ್ಲಿ ಬೀದಿನಾಯಿಗಳ ಹಿಂಡು ನಡೆಸಿದ ದಾಳಿಗೆ ಮೂರು ಕುರಿಗಳು ಬಲಿಯಾಗಿವೆ.</p>.<p>ಶುಕ್ರವಾರ ಮುಂಜಾನೆ ಗ್ರಾಮದ ರೈತ ತನ್ವೀರ್ ಪಾಷಾ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ ಸಾವನ್ನಪ್ಪಿವೆ. ಕೆಂಪಾಪುರ ಕೆರೆ ಬಳಿ ಕುರಿಗಳು ಮೇಯಲು ಹೋದಾಗ ಏಕಾಏಕಿ ದಾಳಿ ನಡೆಸಿವೆ.</p>.<p>ಈ ಭಾಗದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಲು ಕಾಗಿಮಡು ಗೇಟ್ ಬಳಿ ಕೋಳಿ ಅಂಗಡಿ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಅಪ್ರೋಜ್ ಎಂಬುವವರು ನಡೆಸುತ್ತಿರುವ ಕೋಳಿ ಅಂಗಡಿ ಕಸ ಮತ್ತು ತ್ಯಾಜ್ಯವನ್ನು ಪ್ರತಿದಿನ ರಾತ್ರಿ ವೇಳೆ ಕೆರೆ ಬಳಿ ಸುರಿಯಲಾಗುತ್ತಿದೆ.</p>.<p>ಈ ಬಗ್ಗೆ ಈಗಾಗಲೇ ಅದರಂಗಿ ಗ್ರಾಮ ಪಂಚಾಯಿತಿ ಮತ್ತು ಹುಲಿಕಲ್ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಕೆರೆ ಬಳಿ ತ್ಯಾಜ್ಯ ಸುರಿಯುವುದನ್ನು ತಡೆಗಟ್ಟಬೇಕು ಮತ್ತು ನಮಗೆ ನ್ಯಾಯ ಒದಗಿಸಬೇಕು ಎಂದು ರೈತ ತನ್ವೀರ್ ಪಾಷಾ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-14-136557431</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುದೂರು: ತಾಲ್ಲೂಕಿನ ಕುದೂರು ಹೋಬಳಿ ಕೆಂಪಾಪುರ ಗ್ರಾಮದಲ್ಲಿ ಬೀದಿನಾಯಿಗಳ ಹಿಂಡು ನಡೆಸಿದ ದಾಳಿಗೆ ಮೂರು ಕುರಿಗಳು ಬಲಿಯಾಗಿವೆ.</p>.<p>ಶುಕ್ರವಾರ ಮುಂಜಾನೆ ಗ್ರಾಮದ ರೈತ ತನ್ವೀರ್ ಪಾಷಾ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ ಸಾವನ್ನಪ್ಪಿವೆ. ಕೆಂಪಾಪುರ ಕೆರೆ ಬಳಿ ಕುರಿಗಳು ಮೇಯಲು ಹೋದಾಗ ಏಕಾಏಕಿ ದಾಳಿ ನಡೆಸಿವೆ.</p>.<p>ಈ ಭಾಗದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಲು ಕಾಗಿಮಡು ಗೇಟ್ ಬಳಿ ಕೋಳಿ ಅಂಗಡಿ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಅಪ್ರೋಜ್ ಎಂಬುವವರು ನಡೆಸುತ್ತಿರುವ ಕೋಳಿ ಅಂಗಡಿ ಕಸ ಮತ್ತು ತ್ಯಾಜ್ಯವನ್ನು ಪ್ರತಿದಿನ ರಾತ್ರಿ ವೇಳೆ ಕೆರೆ ಬಳಿ ಸುರಿಯಲಾಗುತ್ತಿದೆ.</p>.<p>ಈ ಬಗ್ಗೆ ಈಗಾಗಲೇ ಅದರಂಗಿ ಗ್ರಾಮ ಪಂಚಾಯಿತಿ ಮತ್ತು ಹುಲಿಕಲ್ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಕೆರೆ ಬಳಿ ತ್ಯಾಜ್ಯ ಸುರಿಯುವುದನ್ನು ತಡೆಗಟ್ಟಬೇಕು ಮತ್ತು ನಮಗೆ ನ್ಯಾಯ ಒದಗಿಸಬೇಕು ಎಂದು ರೈತ ತನ್ವೀರ್ ಪಾಷಾ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-14-136557431</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>