ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದ್ದೂರಿಯಾಗಿ ನೆರವೇರಿದ ರಾಮಪ್ಪಸ್ವಾಮಿ ಜಾತ್ರೆ

Published 6 ಮೇ 2024, 4:26 IST
Last Updated 6 ಮೇ 2024, 4:26 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ಕಸಬಾ ಹೋಬಳಿ ತೊರೆಹಳ್ಳಿಯಲ್ಲಿ ಭಾನುವಾರ ರಾಮಪ್ಪದೇವರ ಜಾತ್ರೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಾಗಿ ನೆರವೇರಿತು.

ಜಾತ್ರೆಯ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿ ಮಹಾಮಂಗಳಾರತಿ ನೆರವೇರಿಸಲಾಯಿತು.

ಅರ್ಚಕರು ರಾಮಪ್ಪಸ್ವಾಮಿ ಮುಖವಾಡ ಹೊತ್ತು, ಅರೇವಾದ್ಯ, ಚಿಟ್ಟೆಮೇಳ, ಕೊಂಬು, ಕಹಳೆಯೊಂದಿಗೆ ಗ್ರಾಮಸ್ಥರು ಊರ ಮುಂದೆ ಜಾಲಿ ಮುಳ್ಳನ್ನು ಸುರಿದು ಸಿದ್ಧಪಡಿಸಿದ್ದ ಮುಳ್ಳಿನ ಹಾಸಿಗೆಯ ಬಳಿ ಬಂದು ಕುಣಿಸಲಾಯಿತು. ಮುಳ್ಳಿನ ಹಾಸಿಗೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ರಾಮಪ್ಪಸ್ವಾಮಿ ಮುಖವಾಡ ಹೊತ್ತಿದ್ದ ಅರ್ಚಕರು ಕುಣಿದು ಮುಳ್ಳಿನ ಹಾಸಿಗೆಯ ಮೇಲೆ ಚಾಟಿ ಬೀಸುತ್ತಾ ಬೀಳುವ ಮೂಲಕ ಸಂಪ್ರದಾಯವನ್ನು ನೆರವೇರಿಸಲಾಯಿತು.

ರಾಮಪ್ಪ ಸ್ವಾಮಿಯನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿ ಸಂಜೆ ಮತ್ತಿಘಟ್ಟಕ್ಕೆ ಕೊಂಡಯ್ಯಲಾಯಿತು. ಭಾನುವಾರ ರಾತ್ರಿ ಅಲ್ಲಿಯೇ ಇರುವ ದೇವರು ಸೋಮವಾರ ತೊರೆಹಳ್ಳಿಗೆ ಹಿಂತಿರುಗಿ ಬಂದು ಮತ್ತೆ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ನಂತರ ಜಾತ್ರೆಯನ್ನು ಸಂಪನ್ನಗೊಳಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT