ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ 35 ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿತ್ತು. ಈಗಲೂ ಸರ್ಕಾರ ಶಿಕ್ಷಕರ ಪ್ರಗತಿಗೆ ಬದ್ಧವಾಗಿದೆ. ಶಿಕ್ಷಣ ಕ್ಷೇತ್ರ, ಶಿಕ್ಷಕರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿ ಸಂರಕ್ಷಣೆ ಮಾಡುತ್ತಾ ಬಂದಿದೆ. ಚುನಾವಣೆಯಲ್ಲಿ ಶಿಕ್ಷಕ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು. ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಕೇಳಿಕೊಂಡರು.