<p><strong>ತುಮಕೂರು:</strong> ಈ ಬಾರಿ ರಂಗಾಯಣ ವತಿಯಿಂದ ನಾಟಕೋತ್ಸವವನ್ನು ನ. 17ರಿಂದ 21ರವರೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಸೋಮವಾರ ತಿಳಿಸಿದರು.</p>.<p>ನಗರ ವ್ಯಾಪ್ತಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಬಹುದು. ನಾಟಕೋತ್ಸವದಲ್ಲಿ ಗಣೇಶ ಮಂದಾರ್ತಿ ನಿರ್ದೇಶನದ ‘ಮೈ ಫ್ಯಾಮಿಲಿ’ ನಾಟಕ ಪ್ರದರ್ಶನಗೊಳ್ಳಲಿದೆ. ಪ್ರತಿ ದಿನ ಬೆಳಿಗ್ಗೆ 10.30 ಹಾಗೂ ಮಧ್ಯಾಹ್ನ 2 ಗಂಟೆಗೆ ನಾಟಕ ಪ್ರದರ್ಶನ ಆರಂಭವಾಗಲಿದೆ. ಪ್ರವೇಶ ದರ ಪ್ರತಿ ವಿದ್ಯಾರ್ಥಿಗೆ ₹50 ನಿಗದಿಪಡಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ತಂತ್ರಜ್ಞಾನ ಯುಗದ ಇಂದಿನ ಕಾಲಘಟ್ಟದಲ್ಲಿ ಮೊಬೈಲ್ ಮೂಲಕ ಹಲವು ವರ್ಚುವಲ್ ಲೋಕದಲ್ಲಿ ಬದುಕುತ್ತಿದ್ದೇವೆ. ಈ ‘ವಚ್ರ್ಯುಯಲ್ ಜಗತ್ತು’ ನಮ್ಮೆಲ್ಲರ ನಿಜ ಬದುಕಿನ ವಾಸ್ತವವಾಗಿದೆ. ಜತೆಗೆ ಪ್ರತಿಯೊಬ್ಬರ ಬದುಕಿನ ಲಯಗಳೂ ಬೇರೆ-ಬೇರೆಯಾಗಿವೆ. ಹೀಗೆ ಅಸಹಜ ಮತ್ತು ಸಹಜ ಬದುಕಿನ ನಡುವಿನ ವ್ಯತ್ಯಾಸಗಳೇ ಅರಿವಾಗದಂತೆ, ಛಿದ್ರಗೊಂಡಂತೆ ಭಾಸವಾಗುತ್ತಿರುವ ಲೋಕವನ್ನು ಪ್ರಕೃತಿ ಸಹಜ ಲಯ ಮತ್ತು ಭಾವ-ಬಂಧದಲ್ಲಿ ಧ್ಯಾನಿಸುತ್ತಾ ವಾಸ್ತವ ಲೋಕದ ಅರಿವನ್ನು ಪಡೆದುಕೊಳ್ಳುವ ಪ್ರಯತ್ನ ಈ ಪ್ರಯೋಗದ ಭಾಗವಾಗಿದೆ ಎಂದು ಮಾಹಿತಿ ನೀಡಿದರು.</p>.<p>ಎಚ್.ಕೆ.ದ್ವಾರಕಾನಾಥ್ ರಂಗವಿನ್ಯಾಸ, ಮಹೇಶ್ ಕಲ್ಲತ್ತಿ ಬೆಳಕಿನ ವಿನ್ಯಾಸ, ಗಣೇಶ್ ಮಂದಾರ್ತಿ ಸಂಗೀತ, ವಿನ್ಯಾಸ, ನಿರ್ದೇಶನ, ಶ್ರವಣ್ ಹೆಗ್ಗೋಡು ಪಪೆಟ್ರಿ, ಕೆ.ಆರ್.ನಂದಿ ಪರಿಕರ, ಬಿ.ಎನ್.ಶಶಿಕಲಾ ವಸ್ತ್ರ ವಿನ್ಯಾಸಗೊಳಿಸಲಿದ್ದಾರೆ ಎಂದು ತಿಳಿಸಿದರು.</p>.<p>ಸಂಚಾಲಕ ಯೋಗಾನಂದ್ ಅರಸೀಕೆರೆ, ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಈ ಬಾರಿ ರಂಗಾಯಣ ವತಿಯಿಂದ ನಾಟಕೋತ್ಸವವನ್ನು ನ. 17ರಿಂದ 21ರವರೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಸೋಮವಾರ ತಿಳಿಸಿದರು.</p>.<p>ನಗರ ವ್ಯಾಪ್ತಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಬಹುದು. ನಾಟಕೋತ್ಸವದಲ್ಲಿ ಗಣೇಶ ಮಂದಾರ್ತಿ ನಿರ್ದೇಶನದ ‘ಮೈ ಫ್ಯಾಮಿಲಿ’ ನಾಟಕ ಪ್ರದರ್ಶನಗೊಳ್ಳಲಿದೆ. ಪ್ರತಿ ದಿನ ಬೆಳಿಗ್ಗೆ 10.30 ಹಾಗೂ ಮಧ್ಯಾಹ್ನ 2 ಗಂಟೆಗೆ ನಾಟಕ ಪ್ರದರ್ಶನ ಆರಂಭವಾಗಲಿದೆ. ಪ್ರವೇಶ ದರ ಪ್ರತಿ ವಿದ್ಯಾರ್ಥಿಗೆ ₹50 ನಿಗದಿಪಡಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ತಂತ್ರಜ್ಞಾನ ಯುಗದ ಇಂದಿನ ಕಾಲಘಟ್ಟದಲ್ಲಿ ಮೊಬೈಲ್ ಮೂಲಕ ಹಲವು ವರ್ಚುವಲ್ ಲೋಕದಲ್ಲಿ ಬದುಕುತ್ತಿದ್ದೇವೆ. ಈ ‘ವಚ್ರ್ಯುಯಲ್ ಜಗತ್ತು’ ನಮ್ಮೆಲ್ಲರ ನಿಜ ಬದುಕಿನ ವಾಸ್ತವವಾಗಿದೆ. ಜತೆಗೆ ಪ್ರತಿಯೊಬ್ಬರ ಬದುಕಿನ ಲಯಗಳೂ ಬೇರೆ-ಬೇರೆಯಾಗಿವೆ. ಹೀಗೆ ಅಸಹಜ ಮತ್ತು ಸಹಜ ಬದುಕಿನ ನಡುವಿನ ವ್ಯತ್ಯಾಸಗಳೇ ಅರಿವಾಗದಂತೆ, ಛಿದ್ರಗೊಂಡಂತೆ ಭಾಸವಾಗುತ್ತಿರುವ ಲೋಕವನ್ನು ಪ್ರಕೃತಿ ಸಹಜ ಲಯ ಮತ್ತು ಭಾವ-ಬಂಧದಲ್ಲಿ ಧ್ಯಾನಿಸುತ್ತಾ ವಾಸ್ತವ ಲೋಕದ ಅರಿವನ್ನು ಪಡೆದುಕೊಳ್ಳುವ ಪ್ರಯತ್ನ ಈ ಪ್ರಯೋಗದ ಭಾಗವಾಗಿದೆ ಎಂದು ಮಾಹಿತಿ ನೀಡಿದರು.</p>.<p>ಎಚ್.ಕೆ.ದ್ವಾರಕಾನಾಥ್ ರಂಗವಿನ್ಯಾಸ, ಮಹೇಶ್ ಕಲ್ಲತ್ತಿ ಬೆಳಕಿನ ವಿನ್ಯಾಸ, ಗಣೇಶ್ ಮಂದಾರ್ತಿ ಸಂಗೀತ, ವಿನ್ಯಾಸ, ನಿರ್ದೇಶನ, ಶ್ರವಣ್ ಹೆಗ್ಗೋಡು ಪಪೆಟ್ರಿ, ಕೆ.ಆರ್.ನಂದಿ ಪರಿಕರ, ಬಿ.ಎನ್.ಶಶಿಕಲಾ ವಸ್ತ್ರ ವಿನ್ಯಾಸಗೊಳಿಸಲಿದ್ದಾರೆ ಎಂದು ತಿಳಿಸಿದರು.</p>.<p>ಸಂಚಾಲಕ ಯೋಗಾನಂದ್ ಅರಸೀಕೆರೆ, ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>