<p><strong>ತುಮಕೂರು</strong>: ಮೂಲ ಸಂಸ್ಕೃತಿಯ ವಾರಸುದಾರರಾದ ಜನಪದ ಕಲಾವಿದರಿಗೆ ನೀಡುವ ಗೌರವ, ಮಾತೃ ಋಣದ ಪ್ರತೀಕ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಮನೆ ಗೋಪಾಲಗೌಡ ಅಭಿಪ್ರಾಯಪಟ್ಟರು.</p>.<p>ನಗರದ ಇಂದಿರಾ ವಿದ್ಯಾಸಂಸ್ಥೆ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ಅಶಕ್ತ ಜನಪದ ಕಲಾವಿದರಿಗೆ ಪಡಿತರ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಕೊರೊನಾ ಸಂಕಷ್ಟದ ಕಾಲದಲ್ಲಿ ಆರ್ಥಿಕ ಪರಿಸ್ಥಿತಿ ಮನುಷ್ಯನ ಜೀವನದ ಮೇಲೆ ಅಗಾಧ ಪರಿಣಾಮ ಬೀರಿದೆ. ಜೀವನ ನಡೆಸುವುದು ದುಸ್ತರ ಎನ್ನುವಂತಾಗಿದೆ. ಇಂತಹ ಸಂದರ್ಭದಲ್ಲಿ ಕಲಾವಿದರ ನೆರವಿಗೆ ಬರುವುದು ಮಾನವೀಯ ಕಾರ್ಯ ಎಂದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹರಾಜು, ‘ಕೊರೊನಾದಿಂದಾಗಿ ಕುಟುಂಬದೊಳಗೆ ಅಸ್ಪೃಶ್ಯತೆ ಕಾಡಿದೆ. ತಂದೆ– ಮಗನೇ ನೋಡಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ‘ಕೊರೊನಾ ಮನುಷ್ಯನ ಅಹಂಕಾರಕ್ಕೆ ದೊಡ್ಡ ಸವಾಲಾಗಿದ್ದು, ನಮ್ಮೆಲ್ಲ ಪ್ರಗತಿ, ನಾಗರಿಕತೆಯ ಮದವನ್ನು ಏಕಕಾಲಕ್ಕೆ ಅಡಗಿಸಿದೆ. ಈ ಮೂಲಕ ನಮ್ಮೊಳಗಣ ನಿಜವಾದ ಅಸ್ಪೃಶ್ಯತೆಗೆ ಕಾರಣವಾಗಿದೆ. ದುಡಿದು ಬದುಕುವ ಕಾಯಕ ಯೋಗಿಗಳ ಬದುಕು ಜರ್ಜರಿತವಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಡಾ.ಚಿಕ್ಕಣ್ಣ ಯಣೆಕಟ್ಟೆ, ‘ಕಲಾವಿದರು ಇಂದಿಗೂ ಸಂಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ 71 ಕಲಾವಿದರಿಗೆ ಆಹಾರ ಕಿಟ್ ನೀಡುವ ಅವಕಾಶವನ್ನು ಕೇಂದ್ರ ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮೇಗೌಡ ಒದಗಿಸಿ ಕೊಟ್ಟಿದ್ದಾರೆ’ ಎಂದರು.</p>.<p>ಇಂದಿರಾ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಪ್ರೊ.ರೀಟಾ ಶಿವಮೂರ್ತಿ, ಜಾನಪದ ಪರಿಷತ್ತು ಜಿಲ್ಲಾ ಕಾರ್ಯದರ್ಶಿ ಕೆ.ಎಚ್.ವೆಂಕಟೇಶ್, ಕೋಶಾಧ್ಯಕ್ಷ ಸಿ.ಸುಧೀರ್ಮೂರ್ತಿ ಇದ್ದರು. ಮಾಗಡಿಪಾಳ್ಯ ಸೋಬಾನೆ ರಾಮಯ್ಯ, ಮುಖವೀಣೆ ಮೂಡಲಗಿರಿಯಪ್ಪ, ದಿಬ್ಬದಹಳ್ಳಿ ಭಾಗವತ ರಂಗಪ್ಪ ಜಾನಪದ ಗೀತೆ ಗಾಯನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಮೂಲ ಸಂಸ್ಕೃತಿಯ ವಾರಸುದಾರರಾದ ಜನಪದ ಕಲಾವಿದರಿಗೆ ನೀಡುವ ಗೌರವ, ಮಾತೃ ಋಣದ ಪ್ರತೀಕ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಮನೆ ಗೋಪಾಲಗೌಡ ಅಭಿಪ್ರಾಯಪಟ್ಟರು.</p>.<p>ನಗರದ ಇಂದಿರಾ ವಿದ್ಯಾಸಂಸ್ಥೆ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ಅಶಕ್ತ ಜನಪದ ಕಲಾವಿದರಿಗೆ ಪಡಿತರ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಕೊರೊನಾ ಸಂಕಷ್ಟದ ಕಾಲದಲ್ಲಿ ಆರ್ಥಿಕ ಪರಿಸ್ಥಿತಿ ಮನುಷ್ಯನ ಜೀವನದ ಮೇಲೆ ಅಗಾಧ ಪರಿಣಾಮ ಬೀರಿದೆ. ಜೀವನ ನಡೆಸುವುದು ದುಸ್ತರ ಎನ್ನುವಂತಾಗಿದೆ. ಇಂತಹ ಸಂದರ್ಭದಲ್ಲಿ ಕಲಾವಿದರ ನೆರವಿಗೆ ಬರುವುದು ಮಾನವೀಯ ಕಾರ್ಯ ಎಂದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹರಾಜು, ‘ಕೊರೊನಾದಿಂದಾಗಿ ಕುಟುಂಬದೊಳಗೆ ಅಸ್ಪೃಶ್ಯತೆ ಕಾಡಿದೆ. ತಂದೆ– ಮಗನೇ ನೋಡಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ‘ಕೊರೊನಾ ಮನುಷ್ಯನ ಅಹಂಕಾರಕ್ಕೆ ದೊಡ್ಡ ಸವಾಲಾಗಿದ್ದು, ನಮ್ಮೆಲ್ಲ ಪ್ರಗತಿ, ನಾಗರಿಕತೆಯ ಮದವನ್ನು ಏಕಕಾಲಕ್ಕೆ ಅಡಗಿಸಿದೆ. ಈ ಮೂಲಕ ನಮ್ಮೊಳಗಣ ನಿಜವಾದ ಅಸ್ಪೃಶ್ಯತೆಗೆ ಕಾರಣವಾಗಿದೆ. ದುಡಿದು ಬದುಕುವ ಕಾಯಕ ಯೋಗಿಗಳ ಬದುಕು ಜರ್ಜರಿತವಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಡಾ.ಚಿಕ್ಕಣ್ಣ ಯಣೆಕಟ್ಟೆ, ‘ಕಲಾವಿದರು ಇಂದಿಗೂ ಸಂಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ 71 ಕಲಾವಿದರಿಗೆ ಆಹಾರ ಕಿಟ್ ನೀಡುವ ಅವಕಾಶವನ್ನು ಕೇಂದ್ರ ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮೇಗೌಡ ಒದಗಿಸಿ ಕೊಟ್ಟಿದ್ದಾರೆ’ ಎಂದರು.</p>.<p>ಇಂದಿರಾ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಪ್ರೊ.ರೀಟಾ ಶಿವಮೂರ್ತಿ, ಜಾನಪದ ಪರಿಷತ್ತು ಜಿಲ್ಲಾ ಕಾರ್ಯದರ್ಶಿ ಕೆ.ಎಚ್.ವೆಂಕಟೇಶ್, ಕೋಶಾಧ್ಯಕ್ಷ ಸಿ.ಸುಧೀರ್ಮೂರ್ತಿ ಇದ್ದರು. ಮಾಗಡಿಪಾಳ್ಯ ಸೋಬಾನೆ ರಾಮಯ್ಯ, ಮುಖವೀಣೆ ಮೂಡಲಗಿರಿಯಪ್ಪ, ದಿಬ್ಬದಹಳ್ಳಿ ಭಾಗವತ ರಂಗಪ್ಪ ಜಾನಪದ ಗೀತೆ ಗಾಯನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>