ಕೆಡಿಪಿ ಸಭೆಯಲ್ಲಿ ಮಂಗಳವಾರ ಮಾತನಾಡಿ, ‘ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ನೀಡದಿರುವ ನಿರ್ಧಾರವನ್ನು ಜಿಲ್ಲೆಯ ಮಟ್ಟಿಗಾದರೂ ತೆಗೆದುಕೊಳ್ಳಬೇಕಿದೆ. ಕೆಡಿಪಿ ಸಭೆ ಬುಧವಾರವೂ ಮುಂದುವರೆಯಲಿದ್ದು, ಸಭೆಯಲ್ಲಿ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ. ಎಲ್ಲರ ಜತೆಗೂ ಚರ್ಚಿಸಿ ಅಂತಹದೊಂದು ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ. ಜಿಲ್ಲೆಯಲ್ಲಿ ಇನ್ನೂ 5 ಲಕ್ಷ ಜನರು ಲಸಿಕೆ ಹಾಕಿಸಿಕೊಂಡಿಲ್ಲ’ ಎಂದರು.