<p><strong>ತುಮಕೂರು:</strong> ‘ಹಿಂದೆ ಕೋವಿಡ್ ಲಸಿಕೆ ಇಲ್ಲ ಎನ್ನುತ್ತಿದ್ದರು. ಈಗ ಲಸಿಕೆ ಲಭ್ಯವಿದ್ದರೂ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಕೋವಿಡ್ ತಡೆಗಟ್ಟಲು ಎಲ್ಲರಿಗೂ ಲಸಿಕೆ ಹಾಕುವುದು ಅನಿವಾರ್ಯವಾಗಿದ್ದು, ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಈಗಾಗಲೇ ಸಲಹೆ ನೀಡಿದ್ದೇನೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.</p>.<p>ಕೆಡಿಪಿ ಸಭೆಯಲ್ಲಿ ಮಂಗಳವಾರ ಮಾತನಾಡಿ, ‘ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ನೀಡದಿರುವ ನಿರ್ಧಾರವನ್ನು ಜಿಲ್ಲೆಯ ಮಟ್ಟಿಗಾದರೂ ತೆಗೆದುಕೊಳ್ಳಬೇಕಿದೆ. ಕೆಡಿಪಿ ಸಭೆ ಬುಧವಾರವೂ ಮುಂದುವರೆಯಲಿದ್ದು, ಸಭೆಯಲ್ಲಿ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ. ಎಲ್ಲರ ಜತೆಗೂ ಚರ್ಚಿಸಿ ಅಂತಹದೊಂದು ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ. ಜಿಲ್ಲೆಯಲ್ಲಿ ಇನ್ನೂ 5 ಲಕ್ಷ ಜನರು ಲಸಿಕೆ ಹಾಕಿಸಿಕೊಂಡಿಲ್ಲ’ ಎಂದರು.</p>.<p>ಕೋವಿಡ್ ಯಾವ ಸಮಯದಲ್ಲಿ ಬೇಕಾದರೂ ಹೆಚ್ಚಾಗಬಹುದು. ನಿಯಂತ್ರಿಸಲು ಈಗಿನಿಂದಲೇ ಕ್ರಮ ಕೈಗೊಳ್ಳದಿದ್ದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಹಿಂದೆ ಕೋವಿಡ್ ಲಸಿಕೆ ಇಲ್ಲ ಎನ್ನುತ್ತಿದ್ದರು. ಈಗ ಲಸಿಕೆ ಲಭ್ಯವಿದ್ದರೂ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಕೋವಿಡ್ ತಡೆಗಟ್ಟಲು ಎಲ್ಲರಿಗೂ ಲಸಿಕೆ ಹಾಕುವುದು ಅನಿವಾರ್ಯವಾಗಿದ್ದು, ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಈಗಾಗಲೇ ಸಲಹೆ ನೀಡಿದ್ದೇನೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.</p>.<p>ಕೆಡಿಪಿ ಸಭೆಯಲ್ಲಿ ಮಂಗಳವಾರ ಮಾತನಾಡಿ, ‘ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ನೀಡದಿರುವ ನಿರ್ಧಾರವನ್ನು ಜಿಲ್ಲೆಯ ಮಟ್ಟಿಗಾದರೂ ತೆಗೆದುಕೊಳ್ಳಬೇಕಿದೆ. ಕೆಡಿಪಿ ಸಭೆ ಬುಧವಾರವೂ ಮುಂದುವರೆಯಲಿದ್ದು, ಸಭೆಯಲ್ಲಿ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ. ಎಲ್ಲರ ಜತೆಗೂ ಚರ್ಚಿಸಿ ಅಂತಹದೊಂದು ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ. ಜಿಲ್ಲೆಯಲ್ಲಿ ಇನ್ನೂ 5 ಲಕ್ಷ ಜನರು ಲಸಿಕೆ ಹಾಕಿಸಿಕೊಂಡಿಲ್ಲ’ ಎಂದರು.</p>.<p>ಕೋವಿಡ್ ಯಾವ ಸಮಯದಲ್ಲಿ ಬೇಕಾದರೂ ಹೆಚ್ಚಾಗಬಹುದು. ನಿಯಂತ್ರಿಸಲು ಈಗಿನಿಂದಲೇ ಕ್ರಮ ಕೈಗೊಳ್ಳದಿದ್ದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>