‘ಡಾ.ಜಿ.ಪರಮೇಶ್ವರ ಅವರು ನೆಲಮಂಗಲ ಸಮೀಪ ಬೇಗೂರಿನಲ್ಲಿ ಅರ್ಕಾವತಿ ಜಮೀನನ್ನು ಆಸ್ಪತ್ರೆ ಉದ್ದೇಶಕ್ಕೆ ಪಡೆದು ಹೊಟೇಲ್, ಕಾಂಪ್ಲೆಕ್ಸ್ ಕಟ್ಟಿದ್ದಾರೆ. ತುಮಕೂರಿನಲ್ಲಿ ಹೆಗ್ಗೆರೆ ಮೆಡಿಕಲ್ ಕಾಲೇಜು, ಮರಳೂರು ಸಮೀಪ ರಿಂಗ್ ರಸ್ತೆಯನ್ನೇ ಒತ್ತುವರಿ ಮಾಡಿದ್ದಾರೆ. ಇಂತಹ ಹತ್ತಾರು ಅಕ್ರಮಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ’ ಎಂದು ರಾಜಣ್ಣ ಹಲವು ಸಂಗತಿಗಳನ್ನು ಬಿಚ್ಚಿಟ್ಟರು.