<p><strong>ಪಾವಗಡ</strong>: ಮೊಬೈಲ್ ಹವ್ಯಾಸದಿಂದ ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ಎಚ್. ನಾಗರಾಜ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದಲ್ಲಿ ಅವರು ಮಾತನಾಡಿದರು.</p>.<p>ಗ್ರಂಥಾಲಯಗಳು ಓದುಗರ ಕೈಗೆಟುವಂತಿರಬೇಕು. ಮೊಬೈಲ್ ಬಳಕೆ ಮಿತಿ ಮೀರಿದ್ದು, ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇತ್ತೀಚಿನ ದಿನಗಳಲ್ಲಿ ದಿನಪತ್ರಿಕೆ, ಪ್ರಮುಖ ಪುಸ್ತಕಗಳನ್ನು ಮೊಬೈಲ್ನಲ್ಲಿಯೇ ಓದುವ ಹವ್ಯಾಸ ಹೆಚ್ಚುತ್ತಿದೆ ಎಂದು ತಿಳಿಸಿದರು.</p>.<p>ಗ್ರಂಥಾಲಯ ಸಹಾಯಕ ಟಿ.ಕೆ. ಬಸವರಾಜ್ ಮಾತನಾಡಿ, ಓದುವ ಹವ್ಯಾಸವುಳ್ಳವರಿಗೆ ಸ್ನೇಹಿತರ ಅಗತ್ಯವಿರುವುದಿಲ್ಲ. ಗ್ರಂಥಾಲಯದಲ್ಲಿ ಎಲ್ಲರಿಗೂ ಎಲ್ಲಾ ತರಹದ ಪುಸ್ತಕಗಳಿರುತ್ತವೆ. ವಿವಿಧ ದಿನಪತ್ರಿಕೆಗಳಿರುತ್ತವೆ. ವಿದ್ಯಾರ್ಥಿಗಳು ಸಾರ್ವಜನಿಕ ಓದುಗರು ಅವುಗಳನ್ನು ಓದಿ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಪಟ್ಟಣದ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಪ್ರವೀಣ್ ಕುಮಾರ್, ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಗ್ರಂಥಾಲಯದಲ್ಲಿ ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನನ ಸಂಪಾದಿಸಿ ಎಂದರು.</p>.<p>ಸಪ್ತಾಹದ ಅಂಗವಾಗಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲೆ, ರಸಪ್ರಶ್ನೆ, ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.</p>.<p>ಉತ್ತಮ ಓದುಗ ಪ್ರಶಸ್ತಿ ಪಡೆದ ಟಿ. ಶಶಿಕುಮಾರ ಅವರನ್ನು ಸನ್ಮಾನಿಸಲಾಯಿತು.</p>.<p>ಉಪನ್ಯಾಸಕ ತಿಪ್ಪೇಸ್ವಾಮಿ ದುರ್ಗಾವರ, ಪಳವಳ್ಳಿ ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ಮೊಬೈಲ್ ಹವ್ಯಾಸದಿಂದ ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ಎಚ್. ನಾಗರಾಜ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದಲ್ಲಿ ಅವರು ಮಾತನಾಡಿದರು.</p>.<p>ಗ್ರಂಥಾಲಯಗಳು ಓದುಗರ ಕೈಗೆಟುವಂತಿರಬೇಕು. ಮೊಬೈಲ್ ಬಳಕೆ ಮಿತಿ ಮೀರಿದ್ದು, ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇತ್ತೀಚಿನ ದಿನಗಳಲ್ಲಿ ದಿನಪತ್ರಿಕೆ, ಪ್ರಮುಖ ಪುಸ್ತಕಗಳನ್ನು ಮೊಬೈಲ್ನಲ್ಲಿಯೇ ಓದುವ ಹವ್ಯಾಸ ಹೆಚ್ಚುತ್ತಿದೆ ಎಂದು ತಿಳಿಸಿದರು.</p>.<p>ಗ್ರಂಥಾಲಯ ಸಹಾಯಕ ಟಿ.ಕೆ. ಬಸವರಾಜ್ ಮಾತನಾಡಿ, ಓದುವ ಹವ್ಯಾಸವುಳ್ಳವರಿಗೆ ಸ್ನೇಹಿತರ ಅಗತ್ಯವಿರುವುದಿಲ್ಲ. ಗ್ರಂಥಾಲಯದಲ್ಲಿ ಎಲ್ಲರಿಗೂ ಎಲ್ಲಾ ತರಹದ ಪುಸ್ತಕಗಳಿರುತ್ತವೆ. ವಿವಿಧ ದಿನಪತ್ರಿಕೆಗಳಿರುತ್ತವೆ. ವಿದ್ಯಾರ್ಥಿಗಳು ಸಾರ್ವಜನಿಕ ಓದುಗರು ಅವುಗಳನ್ನು ಓದಿ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಪಟ್ಟಣದ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಪ್ರವೀಣ್ ಕುಮಾರ್, ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಗ್ರಂಥಾಲಯದಲ್ಲಿ ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನನ ಸಂಪಾದಿಸಿ ಎಂದರು.</p>.<p>ಸಪ್ತಾಹದ ಅಂಗವಾಗಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲೆ, ರಸಪ್ರಶ್ನೆ, ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.</p>.<p>ಉತ್ತಮ ಓದುಗ ಪ್ರಶಸ್ತಿ ಪಡೆದ ಟಿ. ಶಶಿಕುಮಾರ ಅವರನ್ನು ಸನ್ಮಾನಿಸಲಾಯಿತು.</p>.<p>ಉಪನ್ಯಾಸಕ ತಿಪ್ಪೇಸ್ವಾಮಿ ದುರ್ಗಾವರ, ಪಳವಳ್ಳಿ ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>