<p><strong>ಮಧುಗಿರಿ:</strong> ತಾಲ್ಲೂಕು ರೆಡ್ಡಿ ಜನ ಸಂಘದಿಂದ ಪ್ರತಿ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಗುವುದು ಎಂದು ತಾಲ್ಲೂಕು ರೆಡ್ಡಿ ಜನ ಸಂಘದ ಅಧ್ಯಕ್ಷ ಕೆ.ಎಸ್. ಪಾಂಡುರಂಗರೆಡ್ಡಿ ತಿಳಿಸಿದರು.</p>.<p>ಪಟ್ಟಣದ ವೇಮನ ರೆಡ್ಡಿ ಸಮಯದಾಯ ಭವನದಲ್ಲಿ ತಾಲ್ಲೂಕು ರೆಡ್ಡಿ ಜನ ಸಂಘದಿಂದ ಗುರುವಾರ ನಡೆದ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.</p>.<p>ರೆಡ್ಡಿ ಜನಸಂಘ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ. ಮುಂದಿನ ದಿನಗಳಲ್ಲಿ ರೆಡ್ಡಿ ಜನ ಸಂಘದ ವಿದ್ಯಾರ್ಥಿ ನಿಲಯ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳಿಸುವ ಉದ್ದೇಶವಿದೆ ಎಂದು ಹೇಳಿದರು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಸಿ. ಕೃಷ್ಣಾರೆಡ್ಡಿ ಮಾತನಾಡಿ, ರೆಡ್ಡಿ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುತ್ತಿದ್ದು, ತಾಲ್ಲೂಕಿಗೆ ಗೌರವ ತಂದಿದ್ದಾರೆ. ವಿದ್ಯಾರ್ಥಿಗಳು ಗುರಿ ಸಾಧಿಸಲು ಸಂಘ ಸದಾ ನಿಮ್ಮ ಹಿಂದೆ ಇರುತ್ತದೆ ಎಂದು ಭರವಸೆ ನೀಡಿದರು.</p>.<p>ಸಾಹಿತಿ ಮ.ಲ.ನ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯ ಹಿಂದೆ ಪೋಷಕರ ಪಾತ್ರ ಮಹತ್ತರವಾದದು. ವಿದ್ಯಾರ್ಥಿಗಳು ಶಿಕ್ಷಕರ ಮತ್ತು ಪೋಷಕರ ಋಣ ತೀರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಯಶ್ವಿತಾ ರೆಡ್ಡಿ, ಪಿ.ಎನ್.ತರುಣ್, ತೇಜಸ್ವಿನಿ, ಗಿರೀಶ್ ಮಂಥರೆಡ್ಡಿ, ಜಸ್ವಂತ್ ರೆಡ್ಡಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಗಗನ್ ಸಾಗರ ರೆಡ್ಡಿ, ಗಾನವಿ ಅವರನ್ನು ಸತ್ಕರಿಸಲಾಯಿತು.</p>.<p>ತಾಲ್ಲೂಕು ರೆಡ್ಡಿ ಜನ ಸಂಘದ ಪದಾಧಿಕಾರಿಗಳಾದ ಲೋಕೋಪಯೋಗಿ ಇಲಾಖೆಯ ನಿವೃತ್ತ ಇಇ ಸುರೇಶ್ ರೆಡ್ಡಿ, ವೆಂಕಟಕೃಷ್ಣಾ ರೆಡ್ಡಿ, ಮೋಹನ್ ಕುಮಾರ್ ರೆಡ್ಡಿ ಅಶ್ವತ ನಾರಾಯಣ ರೆಡ್ಡಿ, ಶ್ರೀನಿವಾಸ ರೆಡ್ಡಿ, ಶನಿವಾರಂರೆಡ್ಡಿ, ತಿಮ್ಮಾರೆಡ್ಡಿ, ಹನುಮಂತರೆಡ್ಡಿ , ಶೈಲಜಾ ಭಾಸ್ಕರರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಮೀಳಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ತಾಲ್ಲೂಕು ರೆಡ್ಡಿ ಜನ ಸಂಘದಿಂದ ಪ್ರತಿ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಗುವುದು ಎಂದು ತಾಲ್ಲೂಕು ರೆಡ್ಡಿ ಜನ ಸಂಘದ ಅಧ್ಯಕ್ಷ ಕೆ.ಎಸ್. ಪಾಂಡುರಂಗರೆಡ್ಡಿ ತಿಳಿಸಿದರು.</p>.<p>ಪಟ್ಟಣದ ವೇಮನ ರೆಡ್ಡಿ ಸಮಯದಾಯ ಭವನದಲ್ಲಿ ತಾಲ್ಲೂಕು ರೆಡ್ಡಿ ಜನ ಸಂಘದಿಂದ ಗುರುವಾರ ನಡೆದ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.</p>.<p>ರೆಡ್ಡಿ ಜನಸಂಘ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ. ಮುಂದಿನ ದಿನಗಳಲ್ಲಿ ರೆಡ್ಡಿ ಜನ ಸಂಘದ ವಿದ್ಯಾರ್ಥಿ ನಿಲಯ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳಿಸುವ ಉದ್ದೇಶವಿದೆ ಎಂದು ಹೇಳಿದರು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಸಿ. ಕೃಷ್ಣಾರೆಡ್ಡಿ ಮಾತನಾಡಿ, ರೆಡ್ಡಿ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುತ್ತಿದ್ದು, ತಾಲ್ಲೂಕಿಗೆ ಗೌರವ ತಂದಿದ್ದಾರೆ. ವಿದ್ಯಾರ್ಥಿಗಳು ಗುರಿ ಸಾಧಿಸಲು ಸಂಘ ಸದಾ ನಿಮ್ಮ ಹಿಂದೆ ಇರುತ್ತದೆ ಎಂದು ಭರವಸೆ ನೀಡಿದರು.</p>.<p>ಸಾಹಿತಿ ಮ.ಲ.ನ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯ ಹಿಂದೆ ಪೋಷಕರ ಪಾತ್ರ ಮಹತ್ತರವಾದದು. ವಿದ್ಯಾರ್ಥಿಗಳು ಶಿಕ್ಷಕರ ಮತ್ತು ಪೋಷಕರ ಋಣ ತೀರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಯಶ್ವಿತಾ ರೆಡ್ಡಿ, ಪಿ.ಎನ್.ತರುಣ್, ತೇಜಸ್ವಿನಿ, ಗಿರೀಶ್ ಮಂಥರೆಡ್ಡಿ, ಜಸ್ವಂತ್ ರೆಡ್ಡಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಗಗನ್ ಸಾಗರ ರೆಡ್ಡಿ, ಗಾನವಿ ಅವರನ್ನು ಸತ್ಕರಿಸಲಾಯಿತು.</p>.<p>ತಾಲ್ಲೂಕು ರೆಡ್ಡಿ ಜನ ಸಂಘದ ಪದಾಧಿಕಾರಿಗಳಾದ ಲೋಕೋಪಯೋಗಿ ಇಲಾಖೆಯ ನಿವೃತ್ತ ಇಇ ಸುರೇಶ್ ರೆಡ್ಡಿ, ವೆಂಕಟಕೃಷ್ಣಾ ರೆಡ್ಡಿ, ಮೋಹನ್ ಕುಮಾರ್ ರೆಡ್ಡಿ ಅಶ್ವತ ನಾರಾಯಣ ರೆಡ್ಡಿ, ಶ್ರೀನಿವಾಸ ರೆಡ್ಡಿ, ಶನಿವಾರಂರೆಡ್ಡಿ, ತಿಮ್ಮಾರೆಡ್ಡಿ, ಹನುಮಂತರೆಡ್ಡಿ , ಶೈಲಜಾ ಭಾಸ್ಕರರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಮೀಳಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>