<p><strong>ತುಮಕೂರು:</strong> ಪ್ರಾಣ ತ್ಯಾಗ ಮಾಡಿದ, ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಶಾಸಕ ಬಿ.ಸುರೇಶ್ಗೌಡ ಹೇಳಿದರು.</p>.<p>ನಗರದ ಸಿದ್ಧಗಂಗಾ ಮಠದಲ್ಲಿ ಭಾನುವಾರ ಸಿಟಿಜನ್ಸ್ ಸೊಸೈಟಿ ಆಫ್ ಇಂಡಿಯಾ ಸಂಘಟನೆಯು ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದರು.</p>.<p>25 ವರ್ಷಗಳ ಹಿಂದೆ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತದ ಅನೇಕ ಯೋಧರು ತಮ್ಮ ಜೀವ ಪಣಕ್ಕಿಟ್ಟು ಹೋರಾಡಿದರು. ಅಂದಿನ ಯುದ್ಧದಲ್ಲಿ ಮಡಿದ ಯೋಧರನ್ನು ಎಲ್ಲರು ಸ್ಮರಿಸಬೇಕು. ಮಕ್ಕಳಿಗೆ ಬಾಲ್ಯದಲ್ಲೇ ದೇಶದ ರಕ್ಷಣೆಯ ಮಹತ್ವ ತಿಳಿಸುವ ಕೆಲಸವಾಗುತ್ತಿದೆ. ಸೈನಿಕರು, ರಾಷ್ಟ್ರದ ಬಗ್ಗೆ ತಿಳಿಹೇಳಬೇಕು ಎಂದರು.</p>.<p>ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಸಂಘಟನೆಯ ರವಿ ಮುನಿಸ್ವಾಮಿ, ಪಿ.ವಿ.ಹರಿ, ಮಣಿಕಂಠನ್, ಎಸ್.ಸಿ.ಭಂಡಾರಿ, ಬಿ.ಪಿ.ಶಿವಕುಮಾರ್, ದಿನೇಶ್, ವಾಸುದೇವನ್, ಶೇಷಾದ್ರಿ, ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪ್ರಾಣ ತ್ಯಾಗ ಮಾಡಿದ, ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಶಾಸಕ ಬಿ.ಸುರೇಶ್ಗೌಡ ಹೇಳಿದರು.</p>.<p>ನಗರದ ಸಿದ್ಧಗಂಗಾ ಮಠದಲ್ಲಿ ಭಾನುವಾರ ಸಿಟಿಜನ್ಸ್ ಸೊಸೈಟಿ ಆಫ್ ಇಂಡಿಯಾ ಸಂಘಟನೆಯು ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದರು.</p>.<p>25 ವರ್ಷಗಳ ಹಿಂದೆ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತದ ಅನೇಕ ಯೋಧರು ತಮ್ಮ ಜೀವ ಪಣಕ್ಕಿಟ್ಟು ಹೋರಾಡಿದರು. ಅಂದಿನ ಯುದ್ಧದಲ್ಲಿ ಮಡಿದ ಯೋಧರನ್ನು ಎಲ್ಲರು ಸ್ಮರಿಸಬೇಕು. ಮಕ್ಕಳಿಗೆ ಬಾಲ್ಯದಲ್ಲೇ ದೇಶದ ರಕ್ಷಣೆಯ ಮಹತ್ವ ತಿಳಿಸುವ ಕೆಲಸವಾಗುತ್ತಿದೆ. ಸೈನಿಕರು, ರಾಷ್ಟ್ರದ ಬಗ್ಗೆ ತಿಳಿಹೇಳಬೇಕು ಎಂದರು.</p>.<p>ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಸಂಘಟನೆಯ ರವಿ ಮುನಿಸ್ವಾಮಿ, ಪಿ.ವಿ.ಹರಿ, ಮಣಿಕಂಠನ್, ಎಸ್.ಸಿ.ಭಂಡಾರಿ, ಬಿ.ಪಿ.ಶಿವಕುಮಾರ್, ದಿನೇಶ್, ವಾಸುದೇವನ್, ಶೇಷಾದ್ರಿ, ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>