ಸ್ವಾಮೀಜಿ ಪುಣ್ಯಸ್ಮರಣೆಯನ್ನು ರಾಜ್ಯದಾದ್ಯಂತ ‘ದಾಸೋಹ ದಿನ’ವಾಗಿ ಆಚರಿಸಲಾಗುತ್ತದೆ. ಕೋವಿಡ್ ಕಾರಣ ಕಳೆದ ವರ್ಷ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಸಿದ್ಧತೆಗಳು ಜೋರಾಗಿ ನಡೆದಿವೆ. ಸಿದ್ಧಲಿಂಗ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವವಹಿಸಲಿದ್ದಾರೆ. ಬೆಂಗಳೂರಿನ ಬೇಲಿಮಠದ ಶಿವರುದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.