ತುಮಕೂರು: ನಗರದಲ್ಲಿ ಜಿಲ್ಲಾ ಆಡಳಿತ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸುವುದು ಐದು ನಿಮಿಷ ತಡವಾಯಿತು.
ಧ್ವಜಾರೋಹಣ ನೆರವೇರಿಸಬೇಕಿದ್ದ ಜಿಲ್ಲಾ ಉಸ್ತಾವಾರಿ ಸಚಿವ ಆರಗ ಜ್ಞಾನೇಂದ್ರ ತಡವಾಗಿ ಬಂದರು.
ಸಾಮಾನ್ಯವಾಗಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಮಾಡುವುದು ನಡೆದುಕೊಂಡು ಬಂದಿದೆ. ಕಾರ್ಯಕ್ರಮ ಹಮ್ಮಿಕೊಂಡಿದ್ದ ಜೂನಿಯರ್ ಕಾಲೇಜು ಮೈದಾನಕ್ಕೆ ಸಚಿವರು ಬರುವುದು ತಡವಾಯಿತು. ಕೊನೆಗೆ ಗಡಿಬಿಡಿಯಲ್ಲಿ ವೇದಿಕೆ ಏರಿ ಧ್ವಜಾರೋಹಣ ನೆರವೇರಿಸಿದರು.