ತುಮಕೂರು: ಧ್ವಜಾರೋಹಣ ನೆರವೇರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ

ತುಮಕೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ನಂತರ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಮೇಯರ್ ಜಿ.ಬಿ.ಕೃಷ್ಣಪ್ಪ ಇದ್ದರು.
ಮಹಿಳಾ ಪೊಲೀಸ್ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್, ನಾಗರಿಕ ಪೊಲೀಸ್ ತಂಡ, ಗೃಹ ರಕ್ಷಕ ದಳ, ಮಹಿಳಾ ಪೊಲೀಸ್ ತಂಡ, ಮಾಜಿ ಸೈನಿಕರ ತಂಡ ಸೇರಿದಂತೆ ಒಟ್ಟು ಹತ್ತು ತುಕಡಿಗಳನ್ನು ತೆರೆದ ವಾಹನಗಳ ಮೂಲಕ ಪರಿವೀಕ್ಷಣೆ ನಡೆಸಿದರು. ನಂತರ ತುಕಡಿಗಳ ಗೌರವ ವಂದನೆ ಸ್ವೀಕರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.