ಮಾಜಿ ಪ್ರಧಾನಿಇಂದಿರಾಗಾಂಧಿ 1971ರಲ್ಲಿ ಜಾರಿಗೆ ತಂದ ಐಸಿಡಿಎಸ್ ಯೋಜನೆಯನ್ನು ಎನ್ಜಿಒಗಳಿಗೆ ನೀಡಿ ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ. ಇದರ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಅಲ್ಲಲ್ಲಿ ಹಿಂದೆ ಸರಿದಿದೆ. ಆದರೆ ಪೋಷಣ್ ಅಭಿಯಾನ್ ಕಾರ್ಯಕ್ರಮದ ಮೂಲಕ ಮಕ್ಕಳು, ಗರ್ಭಿಣಿಯರಿಗೆ, ಕಿಶೋರಿಯರಿಗೆಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮ ರೂಪಿಸಿದೆ. ಕೂಡಲೇ ಸರ್ಕಾರ ಕಡಿತ ಮಾಡಿರುವ ಯೋಜನಾ ವೆಚ್ಚವನ್ನು ಬಿಡುಗಡೆ ಮಾಡಿ ಲಕ್ಷಾಂತರ ನೌಕರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.