ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಹರಿಗೆ ಸಾಗುವಳಿ ಚೀಟಿ ನೀಡಲು ಮನವಿ

ನಾಮ ನಿರ್ದೇಶಿತ ಸದಸ್ಯರಿಗೆ ಸನ್ಮಾನ
Last Updated 1 ಅಕ್ಟೋಬರ್ 2021, 5:08 IST
ಅಕ್ಷರ ಗಾತ್ರ

ಮಧುಗಿರಿ: ಅರ್ಹರಿಗೆ ಸಾಗುವಳಿ ಚೀಟಿ ಕೊಡಿಸುವ ಮೂಲಕ ಉತ್ತಮ ಕೆಲಸ ಮಾಡಿ ಬಿಜೆಪಿಗೆ ಒಳ್ಳೆಯ ಹೆಸರು ತರಬೇಕೆಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಿ.ಎಲ್. ನರಸಿಂಹಮೂರ್ತಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಗರ್ ಹುಕುಂ ಸಮಿತಿಗೆ ಆಯ್ಕೆಯಾದ ಮೂವರು ನಾಮ ನಿರ್ದೇಶಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಾಮಾನ್ಯ ಕಾರ್ಯಕರ್ತರಿಗೂ ಅಧಿಕಾರ ನೀಡುವುದು ಬಿಜೆಪಿಯಲ್ಲಿ ಮಾತ್ರ. ಪಕ್ಷ ನೀಡಿದ ಅಧಿಕಾರವನ್ನು ಕಾರ್ಯಕರ್ತರು ಸದುಪಯೋಗಪಡಿಸಿಕೊಂಡು ಸಾರ್ವಜನಿಕರ ಪರವಾದ ಕೆಲಸ ಮಾಡಬೇಕೆಂದು
ತಿಳಿಸಿದರು.

ಬಗರ್ ಹುಕುಂ ಸಮಿತಿಯಲ್ಲಿ ಬಾಕಿ ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು
ತಿಳಿಸಿದರು.

ಇದೇ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿಗೆ ನಾಮ ನಿರ್ದೇಶನಗೊಂಡ ಪ್ರಸನ್ನಕುಮಾರ್, ನಾರಾಯಣಪ್ಪ, ಉಮಾದೇವಿ ಚೌಡಪ್ಪ ಅವರನ್ನು
ಸನ್ಮಾನಿಸಲಾಯಿತು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರಪ್ಪ, ಉಪಾಧ್ಯಕ್ಷೆ ಲಕ್ಷ್ಮೀಪ್ರಕಾಶ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮೀಪತಿ, ಕಾರ್ಯದರ್ಶಿ ಶಿವಕುಮಾರ್, ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷ ಪ್ರಕಾಶ್, ಅಲೆಮಾರಿ ಜನಾಂಗದ ಅಧ್ಯಕ್ಷ ಮಂಜುನಾಥ್, ಹೋಬಳಿ ಮಹಾಶಕ್ತಿ ಕೇಂದ್ರದ ಪ್ರಮುಖರಾದ ರಂಗನಾಥ್, ವೆಂಕಟೇಶ್, ಗಂಗಾಧರ್, ಶಿವಶಂಕರ್, ಶಾಂತಾರಾಧ್ಯ
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT