<p><strong>ಕುಣಿಗಲ್</strong>: ‘ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆ ಪಿಎಸ್ಐ ಸೌಜನ್ಯದಿಂದ ವರ್ತಿಸುತ್ತಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಪದಾಧಿಕಾರಿಗಳು ಡಿವೈಎಸ್ಪಿ ಓಂ ಪ್ರಕಾಶ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಬಜರಂಗದಳದ ಅಧ್ಯಕ್ಷ ಗಿರೀಶ್, ಜೂನ್ 11ರಂದು ರಾತ್ರಿ ಹೇಮಾವತಿ ವೃತ್ತದ ಬಳಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಡೆಯಲಾಗಿತ್ತು. ಜಾನುವಾರುಗಳನ್ನು ಇಳಿಸಿ, ವಾಹನ ಸಮೇತ ಚಾಲಕ ಪರಾರಿಯಾಗಿದ್ದ. ಈ ಬಗ್ಗೆ ಠಾಣೆಗೆ ದೂರು ನೀಡುವ ಸಮಯದಲ್ಲಿ ಪಿಎಸ್ಐ ಶಮಂತ್ ಗೌಡ, ಸಿಬ್ಬಂದಿ ದಯಾನಂದ್ ಸೌಜನ್ಯದಿಂದ ವರ್ತಿಸದೆ ದರ್ಪ ತೋರಿದ್ದಾರೆ. ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ‘ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆ ಪಿಎಸ್ಐ ಸೌಜನ್ಯದಿಂದ ವರ್ತಿಸುತ್ತಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಪದಾಧಿಕಾರಿಗಳು ಡಿವೈಎಸ್ಪಿ ಓಂ ಪ್ರಕಾಶ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಬಜರಂಗದಳದ ಅಧ್ಯಕ್ಷ ಗಿರೀಶ್, ಜೂನ್ 11ರಂದು ರಾತ್ರಿ ಹೇಮಾವತಿ ವೃತ್ತದ ಬಳಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಡೆಯಲಾಗಿತ್ತು. ಜಾನುವಾರುಗಳನ್ನು ಇಳಿಸಿ, ವಾಹನ ಸಮೇತ ಚಾಲಕ ಪರಾರಿಯಾಗಿದ್ದ. ಈ ಬಗ್ಗೆ ಠಾಣೆಗೆ ದೂರು ನೀಡುವ ಸಮಯದಲ್ಲಿ ಪಿಎಸ್ಐ ಶಮಂತ್ ಗೌಡ, ಸಿಬ್ಬಂದಿ ದಯಾನಂದ್ ಸೌಜನ್ಯದಿಂದ ವರ್ತಿಸದೆ ದರ್ಪ ತೋರಿದ್ದಾರೆ. ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>