<p><strong>ತುಮಕೂರು: </strong>ಬಿಇಡಿ ಪರೀಕ್ಷೆ ರದ್ದುಪಡಿಸಿ, ಮುಂದಿನ ಸೆಮಿಸ್ಟರ್ಗೆ ಬಡ್ತಿ ನೀಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ಬಿಇಡಿ ವಿದ್ಯಾರ್ಥಿಗಳು ತುಮಕೂರು ವಿಶ್ವವಿದ್ಯಾಲಯದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕೋವಿಡ್ ಸಂದರ್ಭದಲ್ಲಿ ತರಗತಿಗಳು ನಡೆಯದೇ ಇರುವುದರಿಂದ ಮುಂದಿನ ಸೆಮಿಸ್ಟರ್ಗೆ ಬಡ್ತಿ ನೀಡುವಂತೆ ಯುಜಿಸಿ, ಕೇಂದ್ರ ಸರ್ಕಾರ ಆದೇಶಿಸಿದೆ. ಆದರೆ ವಿ.ವಿ.ಯಲ್ಲಿ ಯುಜಿಸಿ ನಿಯಮ ಪಾಲನೆಯಾಗುತ್ತಿಲ್ಲ ಎಂದು ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ಆರೋಪಿಸಿದರು.</p>.<p>ವಿದ್ಯಾರ್ಥಿಗಳ ಸಮಸ್ಯೆಗಳಿಗೆ ವಿ.ವಿ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಬೇಕು. ವಿ.ವಿ ವಿಜ್ಞಾನ ಕಾಲೇಜಿನ ವಿವಿಧ ವಿಭಾಗಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಬಹಳಷ್ಟು ಗೊಂದಲ ಉಂಟಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದನ್ನು ಸರಿಪಡಿಸಲು ಮುಂದಾಗಬೇಕು ಎಂದು ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಈ.ಶಿವಣ್ಣ ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಕೊಟ್ರೇಶ್, ‘ಬಿಇಡಿ ವಿದ್ಯಾರ್ಥಿಗಳ ಸಮಸ್ಯೆಗಳು ಗಮನಕ್ಕೆ ಬಂದಿವೆ. ಪರೀಕ್ಷೆಗಳನ್ನು ರದ್ದುಗೊಳಿಸಲಾಗುವುದು. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ಗೆ ಬಡ್ತಿ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಎಸ್ಎಫ್ಐ ಮುಖಂಡರಾದ ನವೀನ್, ಆಶಾ, ತಿಲಕ್, ಕಾವ್ಯ, ಯೋಗೀಶ್, ಜಿ.ದರ್ಶನ್, ಸೌಂದರ್ಯ, ಕಿರಣ್, ಪುಟ್ಟರಾಜ್, ಹನುಮಂತರಾಜು, ಲೋಕೇಶ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಬಿಇಡಿ ಪರೀಕ್ಷೆ ರದ್ದುಪಡಿಸಿ, ಮುಂದಿನ ಸೆಮಿಸ್ಟರ್ಗೆ ಬಡ್ತಿ ನೀಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ಬಿಇಡಿ ವಿದ್ಯಾರ್ಥಿಗಳು ತುಮಕೂರು ವಿಶ್ವವಿದ್ಯಾಲಯದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕೋವಿಡ್ ಸಂದರ್ಭದಲ್ಲಿ ತರಗತಿಗಳು ನಡೆಯದೇ ಇರುವುದರಿಂದ ಮುಂದಿನ ಸೆಮಿಸ್ಟರ್ಗೆ ಬಡ್ತಿ ನೀಡುವಂತೆ ಯುಜಿಸಿ, ಕೇಂದ್ರ ಸರ್ಕಾರ ಆದೇಶಿಸಿದೆ. ಆದರೆ ವಿ.ವಿ.ಯಲ್ಲಿ ಯುಜಿಸಿ ನಿಯಮ ಪಾಲನೆಯಾಗುತ್ತಿಲ್ಲ ಎಂದು ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ಆರೋಪಿಸಿದರು.</p>.<p>ವಿದ್ಯಾರ್ಥಿಗಳ ಸಮಸ್ಯೆಗಳಿಗೆ ವಿ.ವಿ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಬೇಕು. ವಿ.ವಿ ವಿಜ್ಞಾನ ಕಾಲೇಜಿನ ವಿವಿಧ ವಿಭಾಗಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಬಹಳಷ್ಟು ಗೊಂದಲ ಉಂಟಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದನ್ನು ಸರಿಪಡಿಸಲು ಮುಂದಾಗಬೇಕು ಎಂದು ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಈ.ಶಿವಣ್ಣ ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಕೊಟ್ರೇಶ್, ‘ಬಿಇಡಿ ವಿದ್ಯಾರ್ಥಿಗಳ ಸಮಸ್ಯೆಗಳು ಗಮನಕ್ಕೆ ಬಂದಿವೆ. ಪರೀಕ್ಷೆಗಳನ್ನು ರದ್ದುಗೊಳಿಸಲಾಗುವುದು. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ಗೆ ಬಡ್ತಿ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಎಸ್ಎಫ್ಐ ಮುಖಂಡರಾದ ನವೀನ್, ಆಶಾ, ತಿಲಕ್, ಕಾವ್ಯ, ಯೋಗೀಶ್, ಜಿ.ದರ್ಶನ್, ಸೌಂದರ್ಯ, ಕಿರಣ್, ಪುಟ್ಟರಾಜ್, ಹನುಮಂತರಾಜು, ಲೋಕೇಶ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>