ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಡಿ ಪರೀಕ್ಷೆ ರದ್ದತಿಗೆ ಆಗ್ರಹ

Last Updated 7 ಅಕ್ಟೋಬರ್ 2020, 3:12 IST
ಅಕ್ಷರ ಗಾತ್ರ

ತುಮಕೂರು: ಬಿಇಡಿ ಪರೀಕ್ಷೆ ರದ್ದುಪಡಿಸಿ, ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ನೇತೃತ್ವದಲ್ಲಿ ಬಿಇಡಿ ವಿದ್ಯಾರ್ಥಿಗಳು ತುಮಕೂರು ವಿಶ್ವವಿದ್ಯಾಲಯದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕೋವಿಡ್ ಸಂದರ್ಭದಲ್ಲಿ ತರಗತಿಗಳು ನಡೆಯದೇ ಇರುವುದರಿಂದ ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡುವಂತೆ ಯುಜಿಸಿ, ಕೇಂದ್ರ ಸರ್ಕಾರ ಆದೇಶಿಸಿದೆ. ಆದರೆ ವಿ.ವಿ.ಯಲ್ಲಿ ಯುಜಿಸಿ ನಿಯಮ ಪಾಲನೆಯಾಗುತ್ತಿಲ್ಲ ಎಂದು ಎಸ್‍ಎಫ್‍ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ಆರೋಪಿಸಿದರು.

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ವಿ.ವಿ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಬೇಕು. ವಿ.ವಿ ವಿಜ್ಞಾನ ಕಾಲೇಜಿನ ವಿವಿಧ ವಿಭಾಗಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಬಹಳಷ್ಟು ಗೊಂದಲ ಉಂಟಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದನ್ನು ಸರಿಪಡಿಸಲು ಮುಂದಾಗಬೇಕು ಎಂದು ಎಸ್‍ಎಫ್‍ಐ ಜಿಲ್ಲಾ ಘಟಕದ ಅಧ್ಯಕ್ಷ ಈ.ಶಿವಣ್ಣ ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಕೊಟ್ರೇಶ್, ‘ಬಿಇಡಿ ವಿದ್ಯಾರ್ಥಿಗಳ ಸಮಸ್ಯೆಗಳು ಗಮನಕ್ಕೆ ಬಂದಿವೆ. ಪರೀಕ್ಷೆಗಳನ್ನು ರದ್ದುಗೊಳಿಸಲಾಗುವುದು. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಎಸ್‌ಎಫ್‌ಐ ಮುಖಂಡರಾದ ನವೀನ್, ಆಶಾ, ತಿಲಕ್, ಕಾವ್ಯ, ಯೋಗೀಶ್, ಜಿ.ದರ್ಶನ್, ಸೌಂದರ್ಯ, ಕಿರಣ್, ಪುಟ್ಟರಾಜ್, ಹನುಮಂತರಾಜು, ಲೋಕೇಶ್ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT