ರೈಲ್ವೆ ಕೆಳ ಸತುವೆ ನಿರ್ಮಾಣದಿಂದ ಕೊಬ್ಬರಿ ಮಾರುಕಟ್ಟೆಗೆ ಬರಲು ಸಹ ಅನುಕೂಲವಾಗಲಿದೆ. ಜೊತೆಗೆ, ಗಾಂಧಿನಗರ ರೈಲ್ವೆ ನಿಲ್ದಾಣದಿಂದ ಗಾಂಧಿನಗರ ಸೇರಿದಂತೆ 40ಕ್ಕೂ ಹೆಚ್ಚು ಹಳ್ಳಿಗಳಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಇದಾಗಿದೆ. ತಾಲ್ಲೂಕಿನ ಪುಣ್ಯಕ್ಷೇತ್ರಗಳಾದ ಕೆರೆಗೋಡಿ-ರಂಗಾಪುರ ಸುಕ್ಷೇತ್ರ, ದಸರೀಘಟ್ಟದ ಚೌಡೇಶ್ವರಿ ದೇವಿ, ನಾಗರನವಿಲೆ, ಗಂಗನಘಟ್ಟ, ಎಂ. ಶಿವರ, ಕೆಂಬಾಳು ಸಂಪರ್ಕಿಸಲು ಅನುಕೂಲವಾಗುತ್ತದೆ. ಹಾಗಾಗಿ, ತ್ವರಿತವಾಗಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.