<p><strong>ಕುಣಿಗಲ್</strong>: ತಾಲ್ಲೂಕಿನ ದೊಡ್ಡಮಧುರೈ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಎಡೆಯೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ಮುಖಂಡರಾದ ಡಿ.ಜಿ.ಕೃಷ್ಣಪ್ಪ ನೇತೃತ್ವದಲ್ಲಿ ಬಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಸಭೆ ನಡೆಸಿದರು.</p>.<p>ಸಭೆಯಲ್ಲಿ ಮಾತನಾಡಿದ ಮುಖಂಡ ಅಲೋಕ, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುತ್ತಿರುವ ಜಾಗ ಸೂಕ್ತವಾಗಿಲ್ಲ. ಈ ಭಾಗದಲ್ಲಿ ಹೇಮಾವತಿ ನಾಲೆ, ಶಾಲೆ, ಶಿರಾ- ನಂಜನಗೂಡು ರಸ್ತೆ, ಜಾನುವಾರು ಬಳಕೆಯ ಕಟ್ಟೆ, ವಾಸದ ಮನೆ, ರೇಷ್ಮೆ ಇಲಾಖೆ ಇದೆ. ಈಗಾಗಲೇ ಹಲವರು ಮನವಿ ನೀಡಿದ್ದರೂ, ಪ್ರಯೋಜನವಾಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಚೂಡಾಮಣಿ ವೆಂಕಟೇಶ್, ಲಕ್ಷ್ಮಣ, ಗ್ರಾಮಸ್ಥರಾದ ಗಿರೀಶ್, ರಾಜಣ್ಣ, ಪ್ರಕಾಶ್, ಚನ್ನೇಗೌಡ, ನಾಗಣ್ಣ, ಶಂಕರ್, ಮಾಯಣ್ಣ ಇದ್ದರು.</p>.<p>ಅಧ್ಯಕ್ಷ ಕೃಷ್ಣಮೂರ್ತಿ ಮತ್ತು ಪಿಡಿಒ ಹರೀಂದ್ರ ಗೋಪಾಲ್ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನ ದೊಡ್ಡಮಧುರೈ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಎಡೆಯೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ಮುಖಂಡರಾದ ಡಿ.ಜಿ.ಕೃಷ್ಣಪ್ಪ ನೇತೃತ್ವದಲ್ಲಿ ಬಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಸಭೆ ನಡೆಸಿದರು.</p>.<p>ಸಭೆಯಲ್ಲಿ ಮಾತನಾಡಿದ ಮುಖಂಡ ಅಲೋಕ, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುತ್ತಿರುವ ಜಾಗ ಸೂಕ್ತವಾಗಿಲ್ಲ. ಈ ಭಾಗದಲ್ಲಿ ಹೇಮಾವತಿ ನಾಲೆ, ಶಾಲೆ, ಶಿರಾ- ನಂಜನಗೂಡು ರಸ್ತೆ, ಜಾನುವಾರು ಬಳಕೆಯ ಕಟ್ಟೆ, ವಾಸದ ಮನೆ, ರೇಷ್ಮೆ ಇಲಾಖೆ ಇದೆ. ಈಗಾಗಲೇ ಹಲವರು ಮನವಿ ನೀಡಿದ್ದರೂ, ಪ್ರಯೋಜನವಾಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಚೂಡಾಮಣಿ ವೆಂಕಟೇಶ್, ಲಕ್ಷ್ಮಣ, ಗ್ರಾಮಸ್ಥರಾದ ಗಿರೀಶ್, ರಾಜಣ್ಣ, ಪ್ರಕಾಶ್, ಚನ್ನೇಗೌಡ, ನಾಗಣ್ಣ, ಶಂಕರ್, ಮಾಯಣ್ಣ ಇದ್ದರು.</p>.<p>ಅಧ್ಯಕ್ಷ ಕೃಷ್ಣಮೂರ್ತಿ ಮತ್ತು ಪಿಡಿಒ ಹರೀಂದ್ರ ಗೋಪಾಲ್ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>