<p><strong>ತುಮಕೂರು</strong>: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಶುಲ್ಕವನ್ನು ಕಡಿಮೆ ಮಾಡಬೇಕು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೀಘ್ರ ಪೂರಕ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಡಿಡಿಪಿಯು ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>‘ಹಲವು ವಿದ್ಯಾರ್ಥಿಗಳು ಇಂಗ್ಲಿಷ್, ಇತರೆ ವಿಷಯಗಳಿಗೆ ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಶುಲ್ಕವನ್ನು ಪ್ರತಿ ವಿಷಯಕ್ಕೆ ₹1,670, ಉತ್ತರ ಪತ್ರಿಕೆಯ ಜೆರಾಕ್ಸ್ ಪ್ರತಿಗೆ ₹520ಕ್ಕೆ ಹೆಚ್ಚಿಸಲಾಗಿದೆ. ಪ್ರಸ್ತುತ ಕೊರೊನಾದಿಂದಾಗಿ ಜನರು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದಾರೆ. ಶುಲ್ಕ ನಿಗದಿ ದುಬಾರಿಯಾಗಿದ್ದು ಕಡಿತಗೊಳಿಸಬೇಕು’ ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಒತ್ತಾಯಿಸಿದರು.</p>.<p>ಪಿಯುಸಿ ಫಲಿತಾಂಶದಲ್ಲಿ ಕಳೆದ ಬಾರಿ 16ನೇ ಸ್ಥಾನದಲ್ಲಿದ್ದ ಜಿಲ್ಲೆಯು ಈ ಬಾರಿ 23ನೇ ಸ್ಥಾನಕ್ಕೆ ಕುಸಿದಿದೆ. ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಮಹತ್ವದ ಘಟ್ಟವಾಗಿದ್ದು ಜಿಲ್ಲೆಯಲ್ಲಿ ಉಪನ್ಯಾಸಕರ ಕೊರತೆ, ಮೇಲುಸ್ತುವಾರಿ ಸಮಸ್ಯೆಗಳಿಂದ ಫಲಿತಾಂಶದಲ್ಲಿ ಸಾಕಷ್ಟು ಹಿನ್ನಡೆಯಾಗಿದೆ ಎಂದರು.</p>.<p>ಹಲವು ಕಾಲೇಜು ತೀರ ಕಳಪೆ ಸಾಧನೆ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು. ಕಳಪೆ ಫಲಿತಾಂಶ ಬಂದಿರುವ ಕಾಲೇಜುಗಳಿಗೆ ಅಕ್ಕಪಕ್ಕದ ಕಾಲೇಜುಗಳ ತಜ್ಞ ಮತ್ತು ವಿದ್ಯಾರ್ಥಿ ಮಿತ್ರ ಮಾರ್ಗದರ್ಶಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಚಮಾರಯ್ಯ, ಮುಖಂಡರಾದ ರೇವಣಸಿದ್ಧಯ್ಯ, ಮಂಜುನಾಥ್, ಇಕ್ಬಾಲ್ ಅಹಮದ್, ಮರಿಚನ್ನಮ್ಮ, ವೆಂಕಟೇಶ್, ವಾಲೆಚಂದ್ರಯ್ಯ, ಕೊಂಡವಾಡಿ ಸುಮುಖ್, ನಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಶುಲ್ಕವನ್ನು ಕಡಿಮೆ ಮಾಡಬೇಕು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೀಘ್ರ ಪೂರಕ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಡಿಡಿಪಿಯು ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>‘ಹಲವು ವಿದ್ಯಾರ್ಥಿಗಳು ಇಂಗ್ಲಿಷ್, ಇತರೆ ವಿಷಯಗಳಿಗೆ ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಶುಲ್ಕವನ್ನು ಪ್ರತಿ ವಿಷಯಕ್ಕೆ ₹1,670, ಉತ್ತರ ಪತ್ರಿಕೆಯ ಜೆರಾಕ್ಸ್ ಪ್ರತಿಗೆ ₹520ಕ್ಕೆ ಹೆಚ್ಚಿಸಲಾಗಿದೆ. ಪ್ರಸ್ತುತ ಕೊರೊನಾದಿಂದಾಗಿ ಜನರು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದಾರೆ. ಶುಲ್ಕ ನಿಗದಿ ದುಬಾರಿಯಾಗಿದ್ದು ಕಡಿತಗೊಳಿಸಬೇಕು’ ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಒತ್ತಾಯಿಸಿದರು.</p>.<p>ಪಿಯುಸಿ ಫಲಿತಾಂಶದಲ್ಲಿ ಕಳೆದ ಬಾರಿ 16ನೇ ಸ್ಥಾನದಲ್ಲಿದ್ದ ಜಿಲ್ಲೆಯು ಈ ಬಾರಿ 23ನೇ ಸ್ಥಾನಕ್ಕೆ ಕುಸಿದಿದೆ. ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಮಹತ್ವದ ಘಟ್ಟವಾಗಿದ್ದು ಜಿಲ್ಲೆಯಲ್ಲಿ ಉಪನ್ಯಾಸಕರ ಕೊರತೆ, ಮೇಲುಸ್ತುವಾರಿ ಸಮಸ್ಯೆಗಳಿಂದ ಫಲಿತಾಂಶದಲ್ಲಿ ಸಾಕಷ್ಟು ಹಿನ್ನಡೆಯಾಗಿದೆ ಎಂದರು.</p>.<p>ಹಲವು ಕಾಲೇಜು ತೀರ ಕಳಪೆ ಸಾಧನೆ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು. ಕಳಪೆ ಫಲಿತಾಂಶ ಬಂದಿರುವ ಕಾಲೇಜುಗಳಿಗೆ ಅಕ್ಕಪಕ್ಕದ ಕಾಲೇಜುಗಳ ತಜ್ಞ ಮತ್ತು ವಿದ್ಯಾರ್ಥಿ ಮಿತ್ರ ಮಾರ್ಗದರ್ಶಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಚಮಾರಯ್ಯ, ಮುಖಂಡರಾದ ರೇವಣಸಿದ್ಧಯ್ಯ, ಮಂಜುನಾಥ್, ಇಕ್ಬಾಲ್ ಅಹಮದ್, ಮರಿಚನ್ನಮ್ಮ, ವೆಂಕಟೇಶ್, ವಾಲೆಚಂದ್ರಯ್ಯ, ಕೊಂಡವಾಡಿ ಸುಮುಖ್, ನಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>