<p><strong>ಪಟ್ಟನಾಯಕನಹಳ್ಳಿ: </strong>ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬರ ಗಂಟಲು ಸ್ರಾವವನ್ನು ತೆಗೆದುಕೊಂಡಿದ್ದೇವೆ. ಆತನನ್ನು ಪ್ರತ್ಯೇಕವಾಗಿ ಇರಿಸಿ ಎಂದು ಮುನ್ನೆಚ್ಚರಿಕೆ ನೀಡದ ಆರೋಗ್ಯ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿಯಿಂದ ಈಗ ಹಲವು ಮಂದಿ ಕ್ವಾರಂಟೈನ್ನಲ್ಲಿ ಇರಬೇಕಾಗಿದೆ.</p>.<p>ಶಿರಾ ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂ.28ರಂದು ಕೊರೊನಾ ಪರೀಕ್ಷೆಗೆ ವಿದ್ಯಾರ್ಥಿಯ ಗಂಟಲು ಸ್ರಾವ ಮಾದರಿ ತೆಗೆದುಕೊಳ್ಳಲಾಗಿತ್ತು. ಆ ವಿದ್ಯಾರ್ಥಿ ಪಟ್ಟನಾಯಕನಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ.<br />ಈ ವೇಳೆಗೆ ಆತನಲ್ಲಿ ಸೋಂಕು ಇರುವುದು ದೃಢವಾಗಿತ್ತು. ಆದ<br />ಕಾರಣ 14 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರನ್ನು ಕ್ವಾರಂಟೈನ್ ಮಾಡಲಾಗಿದೆ.</p>.<p>ವಿದ್ಯಾರ್ಥಿ ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಶಾಲೆಯ ವಿದ್ಯಾರ್ಥಿಯಾಗಿದ್ದು ಮಠದ ಹಾಸ್ಟೆಲ್ ನಲ್ಲಿದ್ದ ಹಿನ್ನಲೆಯಲ್ಲಿ ವಿದ್ಯಾಸಂಸ್ಥೆಯ ಶಿಕ್ಷಕರು ಮತ್ತು ಸಿಬ್ಬಂದಿ ಸೇರಿದಂತೆ 9 ಜನರನ್ನು ಪಟ್ಟನಾಯಕನಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.</p>.<p class="Subhead">ಪ್ರತ್ಯೇಕ ಪರೀಕ್ಷೆ: ಪರೀಕ್ಷಾ ಕೇಂದ್ರದ ಕೊಠಡಿ ಸಂಖ್ಯೆ 8ರಲ್ಲಿದ್ದ ಎಲ್ಲ ವಿದ್ಯಾರ್ಥಿಗಳನ್ನು ತಲಾ 8 ಮಂದಿಗೆ ಒಂದು ಕೊಠಡಿಯಂತೆ ಪ್ರತ್ಯೇಕವಾಗಿ ಶುಕ್ರವಾರ ಪರೀಕ್ಷೆ ಬರೆಸಲಾಯಿತು.</p>.<p>ವಿದ್ಯಾರ್ಥಿಗೆ ಕೊರೊನಾ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸಿದ್ದೇವೆ ಎಂದು ಮುಂಚೆಯೇ ಹೇಳಿದ್ದರೆ ವಿದ್ಯಾರ್ಥಿಯನ್ನು ಪ್ರತ್ಯೇಕವಾಗಿ ಕೂರಿಸಬಹುದಿತ್ತು. ಆದರೆ ಆರೋಗ್ಯ ಇಲಾಖೆಯವರು ಮಾಹಿತಿ ನೀಡಿಲ್ಲ ಎಂದು ಕ್ವಾರಂಟೈನ್ನಲ್ಲಿ ಇರುವವರು ದೂರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ಟನಾಯಕನಹಳ್ಳಿ: </strong>ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬರ ಗಂಟಲು ಸ್ರಾವವನ್ನು ತೆಗೆದುಕೊಂಡಿದ್ದೇವೆ. ಆತನನ್ನು ಪ್ರತ್ಯೇಕವಾಗಿ ಇರಿಸಿ ಎಂದು ಮುನ್ನೆಚ್ಚರಿಕೆ ನೀಡದ ಆರೋಗ್ಯ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿಯಿಂದ ಈಗ ಹಲವು ಮಂದಿ ಕ್ವಾರಂಟೈನ್ನಲ್ಲಿ ಇರಬೇಕಾಗಿದೆ.</p>.<p>ಶಿರಾ ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂ.28ರಂದು ಕೊರೊನಾ ಪರೀಕ್ಷೆಗೆ ವಿದ್ಯಾರ್ಥಿಯ ಗಂಟಲು ಸ್ರಾವ ಮಾದರಿ ತೆಗೆದುಕೊಳ್ಳಲಾಗಿತ್ತು. ಆ ವಿದ್ಯಾರ್ಥಿ ಪಟ್ಟನಾಯಕನಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ.<br />ಈ ವೇಳೆಗೆ ಆತನಲ್ಲಿ ಸೋಂಕು ಇರುವುದು ದೃಢವಾಗಿತ್ತು. ಆದ<br />ಕಾರಣ 14 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರನ್ನು ಕ್ವಾರಂಟೈನ್ ಮಾಡಲಾಗಿದೆ.</p>.<p>ವಿದ್ಯಾರ್ಥಿ ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಶಾಲೆಯ ವಿದ್ಯಾರ್ಥಿಯಾಗಿದ್ದು ಮಠದ ಹಾಸ್ಟೆಲ್ ನಲ್ಲಿದ್ದ ಹಿನ್ನಲೆಯಲ್ಲಿ ವಿದ್ಯಾಸಂಸ್ಥೆಯ ಶಿಕ್ಷಕರು ಮತ್ತು ಸಿಬ್ಬಂದಿ ಸೇರಿದಂತೆ 9 ಜನರನ್ನು ಪಟ್ಟನಾಯಕನಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.</p>.<p class="Subhead">ಪ್ರತ್ಯೇಕ ಪರೀಕ್ಷೆ: ಪರೀಕ್ಷಾ ಕೇಂದ್ರದ ಕೊಠಡಿ ಸಂಖ್ಯೆ 8ರಲ್ಲಿದ್ದ ಎಲ್ಲ ವಿದ್ಯಾರ್ಥಿಗಳನ್ನು ತಲಾ 8 ಮಂದಿಗೆ ಒಂದು ಕೊಠಡಿಯಂತೆ ಪ್ರತ್ಯೇಕವಾಗಿ ಶುಕ್ರವಾರ ಪರೀಕ್ಷೆ ಬರೆಸಲಾಯಿತು.</p>.<p>ವಿದ್ಯಾರ್ಥಿಗೆ ಕೊರೊನಾ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸಿದ್ದೇವೆ ಎಂದು ಮುಂಚೆಯೇ ಹೇಳಿದ್ದರೆ ವಿದ್ಯಾರ್ಥಿಯನ್ನು ಪ್ರತ್ಯೇಕವಾಗಿ ಕೂರಿಸಬಹುದಿತ್ತು. ಆದರೆ ಆರೋಗ್ಯ ಇಲಾಖೆಯವರು ಮಾಹಿತಿ ನೀಡಿಲ್ಲ ಎಂದು ಕ್ವಾರಂಟೈನ್ನಲ್ಲಿ ಇರುವವರು ದೂರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>