‘ಕಳೆದ ಒಂದು ವರ್ಷದಿಂದ ಬ್ಯಾಂಕಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು, ಕೆಲವು ಸದಸ್ಯರು ಎತ್ತಿರುವ ಪ್ರಶ್ನೆಗಳು ಹಾಗೂ ಬ್ಯಾಂಕಿನಲ್ಲಿ ನಡೆಯುತ್ತಿರುವ ಹತ್ತು, ಹಲವು ವಿದ್ಯಮಾನಗಳ ಬಗ್ಗೆ ನನಗೆ ಮಾಹಿತಿ ಇಲ್ಲವಾಗಿದೆ. ಬ್ಯಾಂಕ್ನ ಸದಸ್ಯರು ಕೇಳುತ್ತಿರುವ ಹಲವಾರು ನಿರ್ದಿಷ್ಟ ಪ್ರಶ್ನೆಗಳಿಗೆ ಬ್ಯಾಂಕ್ನ ನಿರ್ದೇಶಕನಾಗಿ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಿರ್ದೇಶಕನಾಗಿ ಮುಂದುವರಿಯುವುದು ಕಷ್ಟಕರವಾಗಿದೆ. ಹಾಗಾಗಿ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ’ ಎಂದು ಕೆ.ಬಿ.ಶಿವಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.