ಅನುದಾನರಹಿತ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ಸೇವಾಭದ್ರತೆ, ಸಮಾನ ವೇತನಕ್ಕೆ ಒತ್ತು ನೀಡುವುದು, 1995ರ ನಂತರದ ಕನ್ನಡ ಹಾಗೂ ಇತರೆ ಭಾಷೆಗಳ ಎಲ್ಲಾ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ಖಾಸಗಿ ಶಾಲೆಗಳ ಎಲ್ಲಾ ಶಿಕ್ಷಕರಿಗೂ ನಗದು ರಹಿತ ಆರೋಗ್ಯ ವಿಮೆ ಕೊಡಿಸುವುದು, ಶಾಲೆ, ಕಾಲೇಜುಗಳಿಗೆ ಮಾನ್ಯತೆ ನವೀಕರಣವನ್ನು ಭ್ರಷ್ಟಾಚಾರ ಮುಕ್ತವಾಗಿಸುವುದು, ಶಾಶ್ವತ ಮಾನ್ಯತೆ ನವೀಕರಣ ವ್ಯವಸ್ಥೆ, ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಎಲ್ಲಾ ವರ್ಗದ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸುವುದು. ಐಟಿಐ, ಡಿಪ್ಲೊಮಾ, ಬಿಇಡಿ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ವಿವರಿಸಿದರು.