ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 21,126 ವಿದ್ಯಾರ್ಥಿಗಳ ಪೈಕಿ 16,947 ವಿದ್ಯಾರ್ಥಿಗಳು ಮಾತ್ರ ತೇರ್ಗಡೆಯಾಗಿದ್ದು, ಉಳಿದವರ ಭವಿಷ್ಯ ಏನು? ಆ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ ಮತ್ತೆ ಪರೀಕ್ಷೆಗೆ ಸಜ್ಜುಗೊಳಿಸಿ ಇತರ ಮಕ್ಕಳಂತೆಯೇ ಕಾಲೇಜು ಮೆಟ್ಟಿಲು ಹತ್ತುವಂತೆ ಮಾಡುವ ಜವಾಬ್ದಾರಿ ಇಲಾಖೆ, ಶಿಕ್ಷಣ ಸಂಸ್ಥೆ, ಪೋಷಕರ ಮೇಲಿದೆ.