ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

Last Updated 6 ಜನವರಿ 2021, 5:11 IST
ಅಕ್ಷರ ಗಾತ್ರ

ತುರುವೇಕೆರೆ: ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಮರಳಿದ ಯೋಧ ಜಿ.ಎಸ್.ಚಿರಂಜೀವಿ ಅವರನ್ನು ಗೋಣಿ ತುಮಕೂರು ಗ್ರಾಮಸ್ಥರು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಂಡರು.

ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ಎಪಿಎಂಸಿ ಸದಸ್ಯ ವಿಜಯಕುಮಾರ್, ಮುಖಂಡ ಗುಡ್ಡೇನಹಳ್ಳಿ ಮಂಜುನಾಥ್ ಸೇರಿ ಮೈಸೂರು ಪೇಟ, ಶಾಲು ಹಾಕಿ ಸನ್ಮಾನಿಸಿದರು.

ಪಟ್ಟಣದ ನಾಗರಿಕರು, ವಿವಿಧ ರಾಜಕೀಯ ಮುಖಂಡರು, ಆಟೊ ಚಾಲಕರು, ನಾಗರಿಕರು, ಎಬಿವಿಪಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಕಾರ್ಯಕರ್ತರು ಭಾಗವಹಿಸಿ ಸನ್ಮಾನಿಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ತೆರೆದ ವಾಹನದಲ್ಲಿ ವೀರಯೋಧನನ್ನು ಮೆರವಣಿಗೆ ನಡೆಸಿದ ಅಭಿಮಾನಿಗಳು ರಸ್ತೆಯುದ್ದಕ್ಕೂ ನಿವೃತ್ತ ಯೋಧನ ಮೇಲೆ ಹೂಮಳೆಗರೆದರು. ರಸ್ತೆ ಅಕ್ಕಪಕ್ಕ ನಿಂತ ಜನರು ಅಭಿನಂದನೆ ಸಲ್ಲಿಸಿದರು. ಯೋಧನ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮದ ಜನರು ಹಬ್ಬದೋಪಾದಿಯಲ್ಲಿ ಆಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT